alex Certify BIG BREAKING: SP ನಾಯಕ ಅಖಿಲೇಶ್ ಗೆ ಬಿಗ್ ಶಾಕ್; ಮತ್ತೊಬ್ಬ ಸುಗಂಧ ದ್ರವ್ಯ ಉದ್ಯಮಿ ಮನೆ ಮೇಲೆ ಐಟಿ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: SP ನಾಯಕ ಅಖಿಲೇಶ್ ಗೆ ಬಿಗ್ ಶಾಕ್; ಮತ್ತೊಬ್ಬ ಸುಗಂಧ ದ್ರವ್ಯ ಉದ್ಯಮಿ ಮನೆ ಮೇಲೆ ಐಟಿ ದಾಳಿ

ಲಖ್ನೋ: ಮತ್ತೊಬ್ಬ ಸುಗಂಧ ದ್ರವ್ಯ ವ್ಯಾಪಾರಿ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉತ್ತರ ಪ್ರದೇಶದಲ್ಲಿರುವ ಕನೌಜ್ ನಲ್ಲಿರುವ ಸಮಾಜವಾದಿ ಪಕ್ಷದ ಶಾಸಕ ಪುಷ್ಪರಾಜ್ ಜೈನ್ ಮನೆಯಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಈ ಮೂಲಕ ಮತ್ತೊಬ್ಬ ಸುಗಂಧದ್ರವ್ಯ ವ್ಯಾಪಾರಿ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇತ್ತೀಚೆಗಷ್ಟೇ ಪಿಯುಶ್ ಜೈನ್ ನಿವಾಸದ ಮೇಲೆ ಐಟಿ ಅಧಿಕಾರಿಗಳ ದಾಳಿ ನಡೆಸಿದ ಸಂದರ್ಭದಲ್ಲಿ 250 ಕೋಟಿಗೂ ಅಧಿಕ ನಗದು ಮತ್ತು 10 ಕೆಜಿಗೂ ಅಧಿಕ ಚಿನ್ನಾಭರಣ ಪತ್ತೆಯಾಗಿತ್ತು.  ಈ ದಾಳಿ ಬಿಜೆಪಿ ಮತ್ತು ಸಮಾಜವಾದಿ ಪಕ್ಷದ ನಾಯಕರ ನಡುವೆ ವಾಕ್ಸಮರಕ್ಕೆ ಕಾರಣವಾಗಿತ್ತು.

ಕಾನ್ಪುರ ಮೂಲದ ಸುಗಂಧ ದ್ರವ್ಯ ವ್ಯಾಪಾರಿ ಪಿಯೂಷ್ ಜೈನ್ ಅವರನ್ನು ಬಂಧಿಸಿದ ನಂತರ, ಮುಂಬರುವ 2022 ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ಸಮಾಜವಾದಿ ಅತ್ತಾರ್(ಸುಗಂಧ ದ್ರವ್ಯ) ಸಿದ್ಧಪಡಿಸಿದ ಸಮಾಜವಾದಿ ಪಕ್ಷದ ಎಂಎಲ್‌ಸಿ ಪುಷ್ಪರಾಜ್ ಜೈನ್ ಎಂದು ಕೆಲವರು ತಪ್ಪಾಗಿ ಭಾವಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...