ಕರ್ನಾಟಕದ ರಣಜಿ ಕ್ಯಾಪ್ಟನ್, ಕ್ರಿಕೆಟಿಗ ಮಯಾಂಕ್ ಅಗರ್ವಾಲ್ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.
ಕರ್ನಾಟಕದ ರಣಜಿ ಕ್ಯಾಪ್ಟನ್ ಮಯಾಂಕ್ ಅಗರ್ವಾಲ್ ತ್ರಿಪುರಾದಲ್ಲಿ ಪಂದ್ಯ ಆಡಲು ತೆರಳಿದ್ದಾಗ ಘಟನೆ ನಡೆದಿದೆ. ಫ್ಲೈಟ್ ನಲ್ಲಿ ನೀರು ಕುಡಿಯುವಾಗ ಅವರಿಗೆ ಎದೆ ಉರಿ ಬಂದು ಮಯಾಂಕ್ ಅಗರ್ವಾಲ್ ಅಸ್ವಸ್ಥಗೊಂಡಿದ್ದು, ಸ್ಥಳೀಯ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.