alex Certify BREAKING : ‘KAS’ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ-1 ಸೋರಿಕೆ ಆರೋಪ : ಮರು ಪರೀಕ್ಷೆಗೆ ಅಭ್ಯರ್ಥಿಗಳ ಆಗ್ರಹ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘KAS’ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ-1 ಸೋರಿಕೆ ಆರೋಪ : ಮರು ಪರೀಕ್ಷೆಗೆ ಅಭ್ಯರ್ಥಿಗಳ ಆಗ್ರಹ..!

ಬಳ್ಳಾರಿ : ಇಂದು ನಡೆದ ಕೆಎಎಸ್ ಪೂರ್ವಭಾವಿ ಪರೀಕ್ಷೆಯಲ್ಲಿ ಪೇಪರ್-1 ಪತ್ರಿಕೆ ಸೋರಿಕೆ ಆಗಿದೆ ಎಂಬ ಆರೋಪ ಕೇಳಿಬಂದಿದ್ದು, ಮರು ಪರೀಕ್ಷೆ ನಡೆಸುವಂತೆ ಆಕ್ರೋಶ ಹೊರ ಹಾಕಿದ್ದಾರೆ.

ಬಳ್ಳಾರಿಯ ಸೇಂಟ್ ಜಾನ್ಸ್ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಓಪನ್ ಆಗಿರುವ ಪ್ರಶ್ನೆ ಪತ್ರಿಕೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಬರುವ ಮುಂಚೆಯೇ ಸೀಲ್ ಓಪನ್ ಆಗಿದೆ ಎನ್ನಲಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಮರು ಪರೀಕ್ಷೆ ನಡೆಸಬೇಕು ಎಂದು ಪರೀಕ್ಷಾರ್ಥಿಗಳು ಆಗ್ರಹಿಸಿದ್ದಾರೆ.

ಇನ್ನೂ ಬೆಳಗಾವಿಯ ಅಂಜುಮನ್ ಕಾಲೇಜಿನಲ್ಲಿ ಕೂಡ ಇದೇ ತರಹದ ಘಟನೆ ನಡೆದಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಅಲ್ಲದೇ ಪ್ರಶ್ನೆ ಪತ್ರಿಕೆ ಕೊಡಲು 15 ನಿಮಿಷ ತಡ ಮಾಡಲಾಗಿದೆ. ಒಎಂಆರ್ ಶೀಟ್ ಕೂಡ ಅದಲು ಬದಲಾಗಿದೆ ಎಂದು ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...