alex Certify BREAKING : ಶಿವಮೊಗ್ಗದಲ್ಲಿ ಮಣ್ಣು ಕುಸಿದು ಓರ್ವ ಕಾರ್ಮಿಕ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಶಿವಮೊಗ್ಗದಲ್ಲಿ ಮಣ್ಣು ಕುಸಿದು ಓರ್ವ ಕಾರ್ಮಿಕ ದುರ್ಮರಣ

ಶಿವಮೊಗ್ಗ : ಮಣ್ಣು ಕುಸಿದು ಕಾರ್ಮಿಕ ದುರ್ಮರಣಕ್ಕೀಡಾದ ಘಟನೆ ಶಿವಮೊಗ್ಗದ ಸವಳಂಗ ರಸ್ತೆಯಲ್ಲಿ ನಡೆದಿದೆ.

ಸವಳಂಗ ರಸ್ತೆಯ ರೈಲ್ವೆ ಮೇಲು ಸೇತುವೆಯ ಕಾಮಗಾರಿಯ ವೇಳೆ ಅಂಡರ್ ಗ್ರೌಂಡ್ ಪೈಪ್ ಲೈನ್ ಕೂರಿಸುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಒಳಗೆ ಇಳಿದು ಕೆಲಸ ಮಾಡುತ್ತಿದ್ದ ವೇಳೆ ಅಗೆದ ಮಣ್ಣು ಕುಸಿದಿದೆ ಎನ್ನಲಾಗಿದೆ. ಪರಿಣಾಮ ಸತೀಶ್ ತಲೆಗೆ ಗಂಭೀರ ಗಾಯಗಳಾಗಿದೆ.

ರೈಲ್ವೇ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸತೀಶ್ ನಾಯಕ್ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಜೆಸಿಬಿ ಮೂಲಕ ಮಣ್ಣು ತೆಗೆಯುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...