ಚಿಕ್ಕಮಗಳೂರು : ಜಿಲ್ಲೆಯ ಮತ್ತೋರ್ವ ನಕ್ಸಲ್ ಶರಣಾಗತಿಗೆ ಮುಂದಾಗಿದ್ದು, ಮೋಸ್ಟ್ ವಾಂಟೆಂಡ್ ನಕ್ಸಲ್ ರವೀಂದ್ರ ಸಮಾಜದ ಮುಖ್ಯ ವಾಹಿನಿಗೆ ಬರಲಿದ್ದಾನೆ.
ಹೌದು, ಇಂದು ಚಿಕ್ಕಮಗಳೂರು ಜಿಲ್ಲಾಡಳಿತ ಮುಂದೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕಿಗ್ಗದ ಕೋಟೆಹೊಂಡದ ನಕ್ಸಲ್ ರವೀಂದ್ರ ಶರಣಾಗಲಿದ್ದಾನೆ. ಚಿಕ್ಕಮಗಳೂರು ಜಿಲ್ಲಾಧಿಕಾರಿ ವೀಣಾ ನಾಗರಾಜ್, ಎಸ್ ಪಿ ವಿಕ್ರಂ ಆಮ್ಟೆ ಮುಂದೆ ಆತ ಶರಣಾಗತಿಯಾಗಲಿದ್ದಾನೆ.ವಿಕ್ರಂಗೌಡ ಎನ್ ಕೌಂಟರ್ ಬಳಿಕ ನಕ್ಸಲ್ ರವೀಂದ್ರ ನಾಪತ್ತೆಯಾಗಿದ್ದನು.