alex Certify BREAKING : ಮುಡಾ ಹಗರಣ : ಸೆ.26 ರಂದು ‘CM ಸಿದ್ದರಾಮಯ್ಯ’ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಿಗದಿ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮುಡಾ ಹಗರಣ : ಸೆ.26 ರಂದು ‘CM ಸಿದ್ದರಾಮಯ್ಯ’ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಿಗದಿ.!

ಬೆಂಗಳೂರು : ಮುಡಾ ಹಗರಣ ಸಂಬಂಧ ರಾಜ್ಯಪಾಲರ ನಡೆ ಬಗ್ಗೆ ಚರ್ಚಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ.

ಗುರುವಾರ ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸಭೆ ನಿಗದಿಯಾಗಿದೆ. ರಾಜ್ಯಪಾಲರ ನಡೆ ಬಗ್ಗೆ ಸಂಪುಟದಲ್ಲಿ ಮಹತ್ವದ ಚರ್ಚೆ ನಡೆಯಲಿದೆ. ರಾಜ್ಯಪಾಲರ ನೋಟಿಸ್ ಗೆ ಹೇಗೆ ಉತ್ತರ ಕೊಡಬೇಕೆಂದು ಸಭೆಯಲ್ಲಿ ಚರ್ಚಿಸುವ ಸಾಧ್ಯತೆಯಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್ ಏಕಸದಸ್ಯ ಪೀಠ, ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಕ್ರಮವನ್ನು ಎತ್ತಿ ಹಿಡಿದಿದೆ. ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರುದಾರರಾದ ಸ್ನೇಹಮಯಿ ಕೃಷ್ಣ, ಟಿ.ಜೆ.ಅಬ್ರಾಹಂ ಜನಪ್ರತಿನಿಧಿಗಳ ಕೊರ್ಟ್ ನಲ್ಲಿಯೂ ಖಾಸಗಿ ದೂರು ಸಲ್ಲಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...