alex Certify BREAKING NEWS: ನ.1 ರಂದು ಪುನೀತ್‌ ರಾಜಕುಮಾರ್‌ ಅವರಿಗೆ ʼಕರ್ನಾಟಕ ರತ್ನʼ ಪ್ರದಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ನ.1 ರಂದು ಪುನೀತ್‌ ರಾಜಕುಮಾರ್‌ ಅವರಿಗೆ ʼಕರ್ನಾಟಕ ರತ್ನʼ ಪ್ರದಾನ

ಪವರ್‌ ಸ್ಟಾರ್‌ ಪುನೀತ್‌ ರಾಜಕುಮಾರ್‌ ಅವರು ನಮ್ಮನ್ನಗಲಿ ಹಲವು ತಿಂಗಳುಗಳೇ ಕಳೆದರೂ ಸಹ ಜನಮಾನಸದಲ್ಲಿ ಅವರು ಚಿರಸ್ಥಾಯಿಯಾಗಿದ್ದಾರೆ. ಪ್ರತಿಯೊಂದು ಹಳ್ಳಿ, ಪಟ್ಟಣ, ನಗರಗಳಲ್ಲಿ ಈಗಲೂ ಅವರ ಫೋಟೋಗಳು ರಾರಾಜಿಸುತ್ತಿವೆ.

ಪುನೀತ್‌ ರಾಜಕುಮಾರ್‌ ಅವರು ನಿಧನರಾದ ಸಂದರ್ಭದಲ್ಲಿ ಅವರ ಕಲಾ ಸೇವೆ ಮತ್ತು ಸಾಮಾಜಿಕ ಕಾರ್ಯಗಳನ್ನು ಪರಿಗಣಿಸಿ ಕರ್ನಾಟಕ ಸರ್ಕಾರ ʼಕರ್ನಾಟಕ ರತ್ನʼ ಪ್ರಶಸ್ತಿಯನ್ನು ಮರಣೋತ್ತರವಾಗಿ ಪ್ರಕಟಿಸಿತ್ತು.

ಇದೀಗ ನವೆಂಬರ್‌ 1 ರ ಕನ್ನಡ ರಾಜ್ಯೋತ್ಸವ ದಿನದಂದು ಪುನೀತ್‌ ರಾಜಕುಮಾರ್‌ ಅವರಿಗೆ ʼಕರ್ನಾಟಕ ರತ್ನʼ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬೆಂಗಳೂರಿನ ಲಾಲ್‌ ಬಾಗ್‌ ನಲ್ಲಿ ಈ ವಿಚಾರ ತಿಳಿಸಿದ್ದು, ಇದಕ್ಕಾಗಿ ಸಮಿತಿಯೊಂದನ್ನು ಸಹ ರಚಿಸಲಾಗಿದೆ ಎಂದು ಹೇಳಿದ್ದಾರೆ.

ಅಲ್ಲದೇ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದ ವೇಳೆ ಪುನೀತ್‌ ರಾಜಕುಮಾರ್‌ ಅವರ ಕುಟುಂಬ ಸದಸ್ಯರು ಹಾಜರಿರಲಿದ್ದಾರೆ ಎಂದು ಮುಖ್ಯಮಂತ್ರಿಗಳು ಮಾಹಿತಿ ನೀಡಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...