alex Certify BREAKING NEWS: ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಕೊಲೆ ಆರೋಪಿಗೆ ಗುಂಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಕೊಲೆ ಆರೋಪಿಗೆ ಗುಂಡು

ಶಿವಮೊಗ್ಗದ ವೆಂಕಟೇಶ ನಗರದಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹತ್ಯೆ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಓರ್ವ ಆರೋಪಿ, ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ವೇಳೆ ಆತನ ಕಾಲಿಗೆ ಗುಂಡು ಹಾರಿಸಲಾಗಿದೆ.

ಪ್ರಕರಣದ ವಿವರ: ಮಂಗಳವಾರ ಬೆಳಗಿನ ಜಾವ ವೆಂಕಟೇಶ ನಗರದಲ್ಲಿ ವಿಜಯ್‌ ಎಂಬವರನ್ನು  ಹತ್ಯೆ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇದೊಂದು ದರೋಡೆ ಪ್ರಕರಣವಿರಬಹುದು ಎಂಬ ಶಂಕೆ ಹೊಂದಿದ್ದರು.

ಇದೀಗ ವಿಜಯ್‌ ಹತ್ಯೆಗೆ ಸಂಬಂಧಿಸಿದಂತೆ ಜಬಿ, ದರ್ಶನ್‌  ಹಾಗೂ ಕಾರ್ತಿಕ್‌  ಅಲಿಯಾಸ್‌ ಕಟ್ಟೆ ಎಂಬ ಮೂವರನ್ನು ಬಂಧಿಸಿದ್ದು, ಹತ್ಯೆ ಮಾಡಲು ಬಳಸಿದ್ದ ಆಯುಧಗಳನ್ನು ಮಹಜರು ಮಾಡಲು ಆರೋಪಿಗಳನ್ನು ಕರೆದುಕೊಂಡು ಹೋದ ವೇಳೆ ಜಬಿ ಎಂಬಾತ ಪೊಲೀಸ್‌ ಪೇದೆ ಮೇಲೆ ಹಲ್ಲೆ ನಡೆಸಿದ್ದಾನೆ.

ಈ ಸಂದರ್ಭದಲ್ಲಿ ಆತನ ಕಾಲಿಗೆ ಗುಂಡು ಹಾರಿಸಲಾಗಿದ್ದು, ಹಲ್ಲೆಯಿಂದ ಗಾಯಗೊಂಡ ಪೇದೆ ಹಾಗೂ ಆರೋಪಿ ಜಬಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...