alex Certify BREAKING NEWS: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ

ಶಿವಮೊಗ್ಗ: ಒಳ ಮೀಸಲಾತಿ ವಿಂಗಡಣೆ ವಿರೋಧಿಸಿ ಬಂಜಾರಾ ಸಮುದಾಯದವರು ನಡೆಸುತ್ತಿದ್ದ ಪ್ರತಿಭಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಉದ್ರಿಕ್ತರ ಗುಂಪು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಿದೆ.

ಒಳಮೀಸಲಾತಿ ವಿಂಗಡಣೆಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಅನುಮತಿ ನೀಡಿರುವುದನ್ನು ವಿರೋಧಿಸಿ ಬಂಜಾರ ಸಮಾಜ ಇಂದು ಶಿವಮೊಗ್ಗದ ಶಿಕಾರಿಪುರದಲ್ಲಿ ಪ್ರತಿಭಟನೆಗೆ ಕರೆ ಕೊಟ್ಟಿತ್ತು.

ಪ್ರತಿಭಟನೆ ಮೆರವಣಿಗೆ ವೇಳೆ ಉದ್ರಿಕ್ತರ ಗುಂಪು ಮಾಜಿ ಸಿಎಂ ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಿದೆ. ಅಲ್ಲದೇ ಬಿಜೆಪಿಯ ಫ್ಲೆಕ್ಸ್, ಬ್ಯಾನರ್ ಗಳನ್ನು ಹರಿದು ಆಕ್ರೋಶ ವ್ಯಕ್ತಪಡಿಸಿದೆ.

ಉದ್ರಿಕ್ತರ ಗುಂಪು ನಿಯಂತ್ರಿಸಲು ಮುಂದಾದ ಪೊಲೀಸರ ಮೇಲೂ ಕಲ್ಲು ತೂರಾಟ ನಡೆಸಲಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಲು ಹರಸಾಹಸ ಪಟ್ಟ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...