alex Certify BREAKING NEWS: ರಾಜ್ಯದಲ್ಲಿ ಕೊರೋನಾ ಇಳಿಕೆ, 277 ಜನರಿಗೆ ಸೋಂಕು, 7 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಜ್ಯದಲ್ಲಿ ಕೊರೋನಾ ಇಳಿಕೆ, 277 ಜನರಿಗೆ ಸೋಂಕು, 7 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 277 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,86,553 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 343 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 29,39,990 ಜನ ಗುಣಮುಖರಾಗಿದ್ದಾರೆ. ಇವತ್ತು ಒಂದೇ ದಿನ 7 ಜನ ಸೋಂಕಿತರ ಮೃತಪಟ್ಟಿದ್ದು, ಇದುವರೆಗೆ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 38,024 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ 8510 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 0.36 ರಷ್ಟಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 169 ಜನರಿಗೆ ಸೋಂಕು ತಗುಲಿದೆ. ಮೂವರು ಮೃತಪಟ್ಟಿದ್ದಾರೆ. 123 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 6464 ಸಕ್ರಿಯ ಪ್ರಕರಣಗಳು ಇವೆ.

ಜಿಲ್ಲಾವಾರು ಸೋಂಕಿತರ ಮಾಹಿತಿ:

ಬಾಗಲಕೋಟೆ 0, ಬೆಳಗಾವಿ 1, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 1, ದಾವಣಗೆರೆ 0, ಧಾರವಾಡ 0, ಗದಗ 0, ಕೋಲಾರ 0, ಕೊಪ್ಪಳ 0, ರಾಯಚೂರು 0 ವಿಜಯಪುರ 0, ಯಾದಗಿರಿ 0 ಪ್ರಕರಣ ವರದಿಯಾಗಿವೆ.

ಮೃತಪಟ್ಟವರ ಸಂಖ್ಯೆ:

ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 3, ಹಾಸನ 2, ಕೋಲಾರ 1 ಸೇರಿ ರಾಜ್ಯದಲ್ಲಿ ಇಂದು 7 ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...