alex Certify BREAKING NEWS: 3 ವರ್ಷದ ಬಾಲಕನ ಮೇಲೆ ಹರಿದ ವಾಟರ್ ಟ್ಯಾಂಕರ್; ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಹೃದಯವಿದ್ರಾವಕ ಘಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: 3 ವರ್ಷದ ಬಾಲಕನ ಮೇಲೆ ಹರಿದ ವಾಟರ್ ಟ್ಯಾಂಕರ್; ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಹೃದಯವಿದ್ರಾವಕ ಘಟನೆ

ಬೆಂಗಳೂರು: ಬೆಳಿಗ್ಗೆಯಷ್ಟೇ ಶಾಲಾ ಬಸ್ ಹರಿದು ಬಾಲಕಿ ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದ್ದು, ನೀರಿನ ಟ್ಯಾಂಕರ್ ಗೆ ಮೂರು ವರ್ಷದ ಬಾಲಕ ಬಲಿಯಾಗಿರುವ ಘಟನೆ ಬೆಂಗಳೂರಿನ ಶ್ವೇತಾ ರೆಸಿಡೆನ್ಸಿ ಎದುರು ನಡೆದಿದೆ.

ಸರ್ಜಾಪುರ ರಸ್ತೆಯಲ್ಲಿನ ಶ್ವೇತಾ ರೆಸಿಡೆನ್ಸಿ ಅಪಾರ್ಟ್ ಮೆಂಟ್ ಮುಂದೆ ಈ ಅವಘಡ ಸಂಭವಿಸಿದ್ದು, ನೀರನ್ನು ಅನ್ ಲೋಡ್ ಮಾಡಿ ಟ್ಯಾಂಕರ್ ರಿವರ್ಸ್ ತೆಗೆದುಕೊಳ್ಳುತ್ತಿದ್ದಾಗ ಅಪಘಾತ ಸಂಭವಿಸಿದೆ. ನೀರಿನ ಟ್ಯಾಂಕರ್ ಹಿಂದೆ ಇದ್ದ ಬಾಲಕನನ್ನು ಗಮನಿಸದೇ ಚಾಲಕ ಟ್ಯಾಂಕರ್ ಹಿಂದೆ ತೆಗೆದಿದ್ದಾನೆ. ಟ್ಯಾಂಕರ್ ಚಕ್ರಕ್ಕೆ ಸಿಲುಕಿದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮೃತ ಬಾಲಕನನ್ನು ಮೂರು ವರ್ಷದ ಪ್ರತಿಷ್ಠ ಎಂದು ಗುರುತಿಸಲಾಗಿದೆ. ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಹೆಚ್ ಎಸ್ ಆರ್ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...