alex Certify BREAKING NEWS : ದೇಶದಲ್ಲೇ ಮೊದಲ `ಅಂಗಾಂಗ ಜೋಡಣೆ ಆಸ್ಪತ್ರೆ’ ನಿರ್ಮಾಣ : ಸಿಎಂ ಸಿದ್ದರಾಮಯ್ಯ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS : ದೇಶದಲ್ಲೇ ಮೊದಲ `ಅಂಗಾಂಗ ಜೋಡಣೆ ಆಸ್ಪತ್ರೆ’ ನಿರ್ಮಾಣ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು ಮಹತ್ವದ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ. ಈಗಾಗಲೇ 13 ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ ಇದೀಗ 14 ನೇ ಬಾರಿ ಬಜೆಟ್ ಮಂಡಿಸುತ್ತಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಆಗಸ್ಟ್ ತಿಂಗಳಲ್ಲಿ ಗೃಹಜ್ಯೋತಿ ಯೋಜನೆ ಅಧಿಕೃತವಾಗಿ ಜಾರಿಗೆ ಬರಲಿದೆ. 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಬೇಕಾಗಿರುವುದರಿಂದ ವಾರ್ಷಿಕವಾಗಿ 52 ಸಾವಿರ ಕೋಟಿ ರೂ. ಬೇಕಾಗುತ್ತದೆ ಎಂದು ಹೇಳಿದ್ದಾರೆ.

ಅನುಗ್ರಹ ಯೋಜನೆ ಮರು ಜಾರಿ ಮಾಡಲಾಗುವುದು, ರೈತರಿಗೆ 3 ರಿಂದ 5 ಲಕ್ಷ ರೂ.ವರೆಗೆ ಅಲ್ಪಾವಧಿ ಸಾಲ ನೀಡಲಾಗುವುದು. ಮೈಸೂರು-ಕಲಬುರಗಿಯಲ್ಲಿ ಟ್ರಾಮಾ ಸೆಂಟರ್ ಗೆ ಅನುದಾನ, ನಮ್ಮ ಮೆಟ್ರೋಗೆ 30,000 ಕೋಟಿ ರೂ. ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇಂದಿರಾ ಕ್ಯಾಂಟೀನ್ ಗೆ 100 ಕೋಟಿ ರೂ. ಅನುದಾನ ನೀಡಲಾಗುವುದು,  ಬ್ರ್ಯಾಂಡ್ ಬೆಂಗಳೂರಿಗೆ ಬಂಪರ್ ಗಿಫ್ಟ್ ನೀಡಲಾಗಿದ್ದು, ನಮ್ಮ ಮೆಟ್ರೋಗೆ 30,000 ಕೋಟಿ ರೂ. ಅನುದಾನ ನೀಡಲಾಗಿದೆ. 45 ಸಾವಿರ ಕೋಟಿ ಅನುದಾನ ನೀಡಲಾಗಿದೆ. ವೈಟ್ ಟಾಪಿಂಗ್, ರಸ್ತೆಅಭಿವೃದ್ಧಿ, ತ್ಯಾಜ ವಿಲೇವಾರಿ, ಮೆಟ್ರೋ ಉಪನಗರ ರೈಲಿಗೆ 30 ಸಾವಿರ ಕೋಟಿ ರೂ. ನಿಯೋಜನೆ ಮಾಡಲಾಗಿದೆ ಎಂದರು.

ದೇಶದಲ್ಲಿ ಮೊದಲ ಅಂಗಾಂಗ ಜೋಡಣೆ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು. ಕಲಬುರಗಿಯಲ್ಲಿ ತಾಯಿ ಮತ್ತು ಮಗು ಆಸ್ಪತ್ರೆ ನಿರ್ಮಾಣ, ಕೊಪ್ಪಳ, ಕಾರವಾರ, ಕೊಡಗು ಜಿಲ್ಲಾ ಆಸ್ಪತ್ರೆ ಉನ್ನತೀಕರಣ,

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...