alex Certify BREAKING : ‘SIT’ ಬಂ‍ಧನದ ವೇಳೆ ನನ್ನನ್ನು ಟಚ್ ಮಾಡಬೇಡಿ ಎಂದ ‘ಪ್ರಜ್ವಲ್ ರೇವಣ್ಣ’..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘SIT’ ಬಂ‍ಧನದ ವೇಳೆ ನನ್ನನ್ನು ಟಚ್ ಮಾಡಬೇಡಿ ಎಂದ ‘ಪ್ರಜ್ವಲ್ ರೇವಣ್ಣ’..!

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಒಂದು ತಿಂಗಳ ನಂತರ ವಿದೇಶದಿಂದ ಆಗಮಿಸಿದ್ದಾರೆ. ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಡರಾತ್ರಿ ಬಂದಿಳಿದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ಬಂಧಿಸಿದೆ.

ಎಸ್ ಐ ಟಿ ಬಂ‍ಧನದ ವೇಳೆ ನನ್ನನ್ನು ಟಚ್ ಮಾಡಬೇಡಿ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. ನಾನೇ ನಿಮ್ಮ ಜೊತೆ ಬರುತ್ತೇನೆ, ನನ್ನನ್ನು ಟಚ್ ಮಾಡಬೇಡಿ ಎಂದು ಪ್ರಜ್ವಲ್ ರೇವಣ್ಣ ಮನವಿ ಮಾಡಿಕೊಂಡಿದ್ದಾರೆ. ನಂತರ ಕ್ಯೂ ನಲ್ಲಿದ್ದ ಪ್ರಜ್ವಲ್ ರೇವಣ್ಣರನ್ನು ಕ್ಯೂ ನಿಂದ ಹೊರಗೆ ಬರುವಂತೆ ಎಸ್ ಐ ಟಿ ಸೂಚಿಸಿದ್ದು, ನಂತರ ಪ್ರಜ್ವಲ್ ಬಳಿಯಿದ್ದ ಮೊಬೈಲ್ ವಶಕ್ಕೆ ಪಡೆದು ಅವರನ್ನು ಬಂಧಿಸಿದೆ.

ಜರ್ಮನಿಯ ಮ್ಯೂನಿಕ್ ನಗರದಿಂದ ಗುರುವಾರ ಮಧ್ಯಾಹ್ನ ಹೊರಟಿದ್ದ ಪ್ರಜ್ವಲ್ ರೇವಣ್ಣ ರಾತ್ರಿ 12:40ಕ್ಕೆ ಬೆಂಗಳೂರಿಗೆ ಆಗಮಿಸಿದ್ದಾರೆ. ಅವರನ್ನು ವಶಕ್ಕೆ ಪಡೆದುಕೊಂಡ ಎಸ್ಐಟಿ ವಿಮಾನ ನಿಲ್ದಾಣದಿಂದ ಎಸ್ಐಟಿ ಕಚೇರಿಗೆ ಕರೆತಂದಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...