ಬೆಂಗಳೂರು : ಇಂದು ರಾಜ್ಯದ ನಾಲ್ಕು ರಾಜ್ಯಸಭೆ ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, ಬಿಜೆಪಿಗೆ ಶಾಸಕ ಎಸ್.ಟಿ. ಸೋಮಶೇಖರ್ ಶಾಕ್ ಕೊಟ್ಟಿದ್ದಾರೆ.
ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಅಡ್ಡಮತದಾನ ಮಾಡಿದ್ದು, ಕಾಂಗ್ರೆಸ್ ಪರ ಚಲಾಯಿಸಿದ್ದಾರೆ. ಈ ಮೂಲಕ ಬಿಜೆಪಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ.
ಮತದಾನಕ್ಕೂ ಮುನ್ನ ಮಾತನಾಡಿದ ಶಾಸಕ ಎಸ್.ಟಿ. ಸೋಮಶೇಖರ್, ಅನುದಾನ ಕೊಟ್ಟವರಿಗೆ ಮೊದಲ ಪ್ರಾಶಸ್ತ್ಯದ ವೋಟ್. ಕಳೆದ 6 ವರ್ಷಗಳಿಂದ ಇದೆಲ್ಲವನ್ನೂ ನೋಡುತ್ತಿದ್ದೇನೆ. ಎಲ್ಲರೂ ಅನುದಾನ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ ಹೊರತು ಯಾರೊಬ್ಬರೂ ಕ್ಷೇತ್ರಕ್ಕೆ ಅನುದಾನ ಕೊಟ್ಟಿಲ್ಲ. ಹಾಗಾಗಿ ಈ ಬಾರಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಯಾರೇ ಆಗಲಿ ಯಾರು ನನ್ನ ಕ್ಷೇತ್ರಕ್ಕೆ ಅನುದಾನ ಕೊಡುವುದಾಗಿ ಭರವಸೆ ಕೊಡುತ್ತಾರೋ ಅವರಿಗೆ ನನ್ನ ವೋಟ್ ಇದರಲ್ಲಿ ಮುಚ್ಚುಮರೆ ಇಲ್ಲ ಎಂದು ತಿಳಿಸಿದ್ದಾರೆ.