alex Certify BREAKING : ರೇಣುಕಾಸ್ವಾಮಿ ಕೊಲೆ ಕೇಸ್ ; ವಿಚಾರಣೆಗೆ ಹಾಜರಾದ ‘ಡೆವಿಲ್’ ನಿರ್ದೇಶಕ ಮಿಲನ ಪ್ರಕಾಶ್..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರೇಣುಕಾಸ್ವಾಮಿ ಕೊಲೆ ಕೇಸ್ ; ವಿಚಾರಣೆಗೆ ಹಾಜರಾದ ‘ಡೆವಿಲ್’ ನಿರ್ದೇಶಕ ಮಿಲನ ಪ್ರಕಾಶ್..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಡೆವಿಲ್’ ಚಿತ್ರದ ನಿರ್ದೇಶಕ ಮಿಲನ ಪ್ರಕಾಶ್ ಇಂದು ವಿಚಾರಣೆಗೆ ಹಾಜರಾಗಿದ್ದಾರೆ.

ಬೆಂಗಳೂರಿನ ಬಸವೇಶ್ವರ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾದ ನಿರ್ದೇಶಕ ಮಿಲನ ಪ್ರಕಾಶ್ ಕೆಲವು ಮಹತ್ವದ ಹೇಳಿಕೆ ದಾಖಲಿಸಿದ್ದಾರೆ ಎನ್ನಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಳಿಕ ನಟ ದರ್ಶನ್ ಡೆವಿಲ್ ಚಿತ್ರದ ಶೂಟಿಂಗ್ ನಲ್ಲಿ ಭಾಗಿಯಾಗಿದ್ದರು.
ಈ ವೇಳೆ ಅವರು ಪ್ರಕರಣದ ಬಗ್ಗೆ ಏನಾದ್ರೂ ಮಾತನಾಡಿದ್ರಾ..? ಕೊಲೆ ಬಗ್ಗೆ ಏನಾದರೂ ಡಿಸ್ಕಶನ್ ಮಾಡಿದ್ರಾ..? ಎಂಬುದರ ಬಗ್ಗೆ ವಿಚಾರಿಸಲು ಮಿಲನ ಪ್ರಕಾಶ್ ಅವರನ್ನು ಪೊಲೀಸರು ಕರೆಸಿಕೊಂಡಿದ್ದರು ಎನ್ನಲಾಗಿದೆ. ಪ್ರಕರಣಕ್ಕೂ ಮುನ್ನ ಕೊನೆಯ ಬಾರಿ ದರ್ಶನ್ ಅವರನ್ನು ಭೇಟಿಯಾಗಿದ್ದು ಯಾವಾಗ? ಡೆವಿಲ್ ಚಿತ್ರಕ್ಕೆ ಸಂಬಂಧಪಟ್ಟಂತೆ ದರ್ಶನ್ಗೆ ಹಣ ನೀಡಿದ್ರಾ? ಈ ಬಗ್ಗೆ ಪೊಲೀಸರು ಮಿಲನ ಪ್ರಕಾಶ್ ಅವರ ಬಳಿ ಸ್ಪಷ್ಟನೆ ಕೇಳಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...