alex Certify BREAKING : ‘CM ಸಿದ್ದರಾಮಯ್ಯ’ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಭದ್ರತಾ ಲೋಪ ; ವೇದಿಕೆಗೆ ನುಗ್ಗಿದ ಯುವಕ ಪೊಲೀಸ್ ವಶಕ್ಕೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘CM ಸಿದ್ದರಾಮಯ್ಯ’ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಭದ್ರತಾ ಲೋಪ ; ವೇದಿಕೆಗೆ ನುಗ್ಗಿದ ಯುವಕ ಪೊಲೀಸ್ ವಶಕ್ಕೆ..!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಭದ್ರತಾ ಲೋಪ ಕಂಡು ಬಂದಿದ್ದು, ವೇದಿಕೆಗೆ ನುಗ್ಗಿದ ಯುವಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ .

ರಾಜ್ಯ ಸರ್ಕಾರ ಏಳನೇ ವೇತನ ಆಯೋಗ ಜಾರಿಗೊಳಿಸಿ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿತ್ತು. ಈ ಹಿನ್ನೆಲೆ ಸರ್ಕಾರಿ ನೌಕರರ ಸಂಘ ಸರ್ಕಾರಕ್ಕೆ ಧನ್ಯವಾದ ತಿಳಿಸಲು ‘ನಮ್ಮಾಭಿಮಾನದ ಅಭಿನಂದನಾ ಸಮಾರಂಭ’ ವನ್ನು ಶನಿವಾರದಂದು ಏರ್ಪಡಿಸಿತ್ತು. ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದರು.

ಈ ಕಾರ್ಯಕ್ರಮದಲ್ಲಿ ವೇದಿಕೆಗೆ ಯುವಕನೊಬ್ಬ ಸಡನ್ ಆಗಿ ನುಗ್ಗಿದ್ದಾನೆ. ಕೂಡಲೇ ಅಲರ್ಟ್ ಆದ ಪೊಲೀಸರು ಯುವಕನನ್ನು ತಡೆದು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಯುವಕನ ವರ್ತನೆಗೆ ಕಾರಣ ತಿಳಿದು ಬಂದಿಲ್ಲ. ಸಿಎಂ ಭಾಷಣ ಮಾಡುತ್ತಿದ್ದಂತೆ ಓಡೋಡಿ ಬಂದು ಸಿಎಂ ಕಾಲಿಗೆ ಬೀಳಲು ಮುಂದಾಗಿದ್ದಾನೆ. ಮಧುಗಿರಿ ಮೂಲದ ಯುವಕ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದ್ದು, ಮದ್ಯ ಸೇವಿಸಿ ಬಂದ ಯುವಕನನ್ನು ಸದಾಶಿವನಗರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...