alex Certify BREAKING : ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ; ಬೆಂಗಳೂರಿನ ಕೋರ್ಟ್ ಗೆ ‘ಉದಯ ನಿಧಿ ಸ್ಟಾಲಿನ್’ ಹಾಜರು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ; ಬೆಂಗಳೂರಿನ ಕೋರ್ಟ್ ಗೆ ‘ಉದಯ ನಿಧಿ ಸ್ಟಾಲಿನ್’ ಹಾಜರು..!

ಬೆಂಗಳೂರು : ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕೋರ್ಟ್ ಗೆ ಸಚಿವ ಉದಯ ನಿಧಿ ಸ್ಟಾಲಿನ್ ಹಾಜರಾಗಿದ್ದಾರೆ.

ಬೆಂಗಳೂರಿನ 42 ನೇ ಎಸಿಎಂಎಂ ಕೋರ್ಟ್ ಗೆ ಉದಯ ನಿಧಿ ಸ್ಟಾಲಿನ್ ಹಾಜರಾಗಿದ್ದಾರೆ. ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆ ಪರಮೇಶ್ ಎಂಬುವವರು ಉದಯ ನಿಧಿ ಸ್ಟಾಲಿನ್ ವಿರುದ್ಧ ದೂರು ನೀಡಿದ್ದರು. ಖುದ್ದು ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಉದಯ ನಿಧಿ ಸ್ಟಾಲಿನ್ ಗೆ ಸೂಚನೆ ನೀಡಿತ್ತು. ಅಂತೆಯೇ ಬೆಂಗಳೂರಿನ ಕೋರ್ಟ್ ಗೆ ಸಚಿವ ಉದಯ ನಿಧಿ ಸ್ಟಾಲಿನ್ ಹಾಜರಾಗಿದ್ದಾರೆ.

ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾದಂತಹ ಕಾಯಿಲೆಗಳಿಗೆ ಹೋಲಿಸಿದ ವಿವಾದಾತ್ಮಕ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾದಂತಹ ಕಾಯಿಲೆಗಳಿಗೆ ಹೋಲಿಸಿ ಮಾತನಾಡಿದ್ದರು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು. ಜಾತಿಯ ಆಧಾರದ ಮೇಲೆ ತಾರತಮ್ಯವನ್ನು ಕೊನೆಗೊಳಿಸಬೇಕು ಎಂದು ಸ್ಟಾಲಿನ್  ಹೇಳಿದ್ದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...