alex Certify BREAKING : ಚಿಕ್ಕೋಡಿಯಲ್ಲಿ ಟಿಪ್ಪು ಸೇರಿ ಮುಸ್ಲಿಂ ರಾಜರನ್ನು ಅವಮಾನಿಸುವ ಸ್ಟೇಟಸ್ : ಬಿಗುವಿನ ವಾತಾವರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಚಿಕ್ಕೋಡಿಯಲ್ಲಿ ಟಿಪ್ಪು ಸೇರಿ ಮುಸ್ಲಿಂ ರಾಜರನ್ನು ಅವಮಾನಿಸುವ ಸ್ಟೇಟಸ್ : ಬಿಗುವಿನ ವಾತಾವರಣ

ಚಿಕ್ಕೋಡಿ : ಟಿಪ್ಪು ಸೇರಿದಂತೆ ಮುಸ್ಲಿಂ ರಾಜರನ್ನು ಅವಮಾನಿಸುವ ವಾಟ್ಸಾಪ್ ಸ್ಟೇಟಸ್ ಹಾಗೂ ಬ್ಯಾನರ್ ಅಳವಡಿಕೆ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಆಕ್ರೋಶ ಭುಗಿಲೆದ್ದಿದೆ.

ಘಟನೆ ಹಿನ್ನೆಲೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಸರ್ಪಗಾವಲು ನಿಯೋಜಿಸಲಾಗಿದೆ.

ಟಿಪ್ಪು ಸುಲ್ತಾನ್ ಸೇರಿದಂತೆ ಹಲವು ಮುಸ್ಲಿಂ ರಾಜರನ್ನು ಅವಮಾನಿಸುವ ಸ್ಟೇಟಸ್ ಹಾಗೂ ಬ್ಯಾನರ್ ಅಳವಡಿಸಲಾಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.ವಿವಾದಿತ ವಾಟ್ಸಪ್ ಸ್ಟೇಟಸ್ ಹಾಕಿದ್ದವರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಈ ಸಂಬಂಧ ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...