ಮೈಸೂರು : ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೌಲ್ವಿ ಮುಫ್ತಿ ಮುಸ್ತಾಕ್ ಜಾಮೀನು ಅರ್ಜಿ ವಜಾಗೊಳಿಸಿ ಮೈಸೂರಿನ ಕೋರ್ಟ್ ಆದೇಶ ಹೊರಡಿಸಿದೆ.
ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಮೌಲ್ವಿ ಮುಫ್ತಿ ಮುಸ್ತಾಕ್ ನನ್ನು ಪೊಲೀಸರು ಬಂಧಿಸಿದ್ದರು.
ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲಾಟೆಗೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಮೌಲ್ವಿ ಮುಫ್ತಿ ಮುಸ್ತಾಕ್ ನನ್ನು ಬಂಧಿಸಲಾಗಿತ್ತು. ಪ್ರಕರಣ ನಡೆದು 17 ದಿನಗಳ ಬಳಿಕ ಆರೋಪಿ ಅರೆಸ್ಟ್ ಆಗಿದ್ದನು. ಜಾಮೀನಿಗೆ ಅರ್ಜಿ ಸಲ್ಲಿಸಿದ ಮುಫ್ತಿ ಮುಸ್ತಾಕ್ ಅರ್ಜಿ ವಜಾಗೊಳಿಸಿ ಮೈಸೂರಿನ ಕೋರ್ಟ್ ಆದೇಶ ಹೊರಡಿಸಿದೆ.