alex Certify BREAKING : ಕಾಡಿನಂಚಿನ ಗ್ರಾಮಗಳಿಗೆ ಹಗಲಿನಲ್ಲೇ 3 ಫೇಸ್ ವಿದ್ಯುತ್ ಪೂರೈಸಿ : ಸಿಎಂ ಗೆ ಸಚಿವ ಈಶ್ವರ್ ಖಂಡ್ರೆ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕಾಡಿನಂಚಿನ ಗ್ರಾಮಗಳಿಗೆ ಹಗಲಿನಲ್ಲೇ 3 ಫೇಸ್ ವಿದ್ಯುತ್ ಪೂರೈಸಿ : ಸಿಎಂ ಗೆ ಸಚಿವ ಈಶ್ವರ್ ಖಂಡ್ರೆ ಮನವಿ

ಬೆಂಗಳೂರು : ಕಾಡಂಚಿನಲ್ಲಿರುವ ಗ್ರಾಮಗಳಿಗೆ ಹಗಲಿನಲ್ಲೇ 3 ಫೇಸ್ ವಿದ್ಯುತ್ ಪೂರೈಸುವಂತೆ ಸಿಎಂ ಸಿದ್ದರಾಮಯ್ಯಗೆ ಸಚಿವ ಈಶ್ವರ್ ಖಂಡ್ರೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಹುಲಿ, ಚಿರತೆ ಸೇರಿದಂತೆ ಕಾಡು ಪ್ರಾಣಿಗಳಿರುವ ಕಾಡಂಚಿನ ಪ್ರದೇಶಗಳಲ್ಲಿ ರೈತರು ನೀರು ಬಿಡಲು ಜಮೀನಿಗೆ ಬರಬೇಕಾಗುತ್ತದೆ. ಪಂಪ್ ಸೆಟ್ ಆನ್ ಹಾಗೂ ಆಫ್ ಮಾಡಲು ಪದೇ ಪದೇ ಓಡಾಡಬೇಕಾಗುತ್ತದೆ. ಆದ್ದರಿಂದ ರಾತ್ರಿ ಬದಲಾಗಿ ಹಗಲಿನಲ್ಲೇ ರೈತರಿಗೆ 3 ಫೇಸ್ ವಿದ್ಯುತ್ ನೀಡುವಂತೆ ಇಂಧನ ಇಲಾಖೆ ಸಿಬ್ಬಂದಿಗಳಿಗೆ ಸೂಚನೆ ನೀಡುವಂತೆ ಅವರು ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದಾರೆ.

ಇತ್ತೀಚೆಗೆ ವನ್ಯಜೀವಿ-ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದೆ. ಪ್ರಾಣಿಗಳು ಕಾಡಿನಿಂದ ಊರೊಳಗೆ ಬಂದು ಮನುಷ್ಯರ ಮೇಲೆ ದಾಳಿ ನಡೆಸುತ್ತಿದೆ, ಇದನ್ನು ತಪ್ಪಿಸಲು ಹಗಲಿನಲ್ಲೇ 3 ಫೇಸ್ ವಿದ್ಯುತ್ ನೀಡಿ ಎಂದು ಮನವಿ ಸಲ್ಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...