alex Certify BREAKING : ನಿರ್ಮಾಪಕ ಉಮಾಪತಿಗೆ ಬೆದರಿಕೆ ಆರೋಪ ; ನಟ ದರ್ಶನ್ ವಿರುದ್ಧ ‘ಫಿಲ್ಮ್ ಚೇಂಬರ್’ ಗೆ ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ನಿರ್ಮಾಪಕ ಉಮಾಪತಿಗೆ ಬೆದರಿಕೆ ಆರೋಪ ; ನಟ ದರ್ಶನ್ ವಿರುದ್ಧ ‘ಫಿಲ್ಮ್ ಚೇಂಬರ್’ ಗೆ ದೂರು

ಬೆಂಗಳೂರು : ನಿರ್ಮಾಪಕ ಉಮಾಪತಿ ವಿರುದ್ಧ ನಟ ದರ್ಶನ್ ನೀಡಿರುವ ಹೇಳಿಕೆ ಸಂಬಂಧ ನಟ ದರ್ಶನ್ ವಿರುದ್ಧ ಫಿಲಂಚೇಂಬರ್ ಗೆ ದೂರು ನೀಡಲಾಗಿದೆ.

ಈ ಸಂಬಂಧ ಪ್ರಜಾಪರ ವೇದಿಕೆ ಕಾರ್ಯಕರ್ಯರು ಫಿಲಂಚೇಂಬರ್ ಗೆ ದೂರು ನೀಡಿದ್ದು, ನಟ ದರ್ಶನ್ ಗುಮ್ಮಿಸ್ಕೊತಿಯಾ ಎಂದು ಹೇಳುವ ಮೂಲಕ ನಿರ್ಮಾಪಕ ಉಮಾಪತಿಗೆ ಬೆದರಿಕೆ ಹಾಕಿದ್ದಾರೆ, ಅವರು ಕ್ಷಮೆಯಾಚಿಸಬೇಕು ಎಂದು ಪ್ರಜಾಪರ ವೇದಿಕೆ ನಟ ದರ್ಶನ್ ವಿರುದ್ಧ ದೂರು ದಾಖಲಿಸಿದೆ.  ನಟ ದರ್ಶನ್ ಬಳಸಿದ ‘ಗುಮ್ಮಿಸ್ಕೊತಿಯಾ..?’ ‘ತಗಡು’ ಪದ ಬಳಕೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಅಯ್ಯೋ ತಗಡೇ, ನಿನಗೆ ‘ರಾಬರ್ಟ್’ ಕಥೆ ಕೊಟ್ಟಿದ್ದೇ ನಾವು..ಹೀಗಂತ ನಿರ್ಮಾಪಕ ಉಮಾಪತಿಗೆ ನಟ ದರ್ಶನ್ ಖಡಕ್ ಆಗಿ ತಿರುಗೇಟು ನೀಡಿದ್ದರು .ಪ್ರಸನ್ನ ಚಿತ್ರಮಂದಿರದಲ್ಲಿ ‘ಕಾಟೇರ’ ಚಿತ್ರದ 50ನೇ ದಿನದ ಸಂಭ್ರಮಾಚರಣೆ ನಡೆದಿದ್ದು, ಕಾರ್ಯಕ್ರಮದಲ್ಲಿ ಮಾತನಾಡಿದ ನಟ ದರ್ಶನ್ ಉಮಾಪತಿಗೆ ಖಡಕ್ ತಿರುಗೇಟು ನೀಡಿದ್ದಾರೆ.

‘ಕಾಟೇರ’ ಕಥೆ ಹೇಳಿದ್ದು ನಾನು, ಟೈಟಲ್ ಕೊಟ್ಟಿದ್ದು ನಾನು ಎಂದು ಉಮಾಪತಿ ಹೇಳಿದ್ದರು. ಇದಕ್ಕೆ ದರ್ಶನ್ ಖಡಕ್ ಆಗಿ ಉತ್ತರ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ನಟ ದರ್ಶನ್ ….ಯಾಕಪ್ಪಾ..ಬಂದು ಬಂದು ನನ್ನ ಹತ್ತಿರನೇ ಗುಮ್ಮಿಸಿಕೊಳ್ತೀಯಾ..? “ಕೆಲವರು ಕಥೆ ನಾನು ಮಾಡಿಸಿದೆ. ಟೈಟಲ್ ನಾನು ಕೊಟ್ಟೆ ಅಂತ ಹೇಳ್ತಿದ್ದಾರೆ..? ಅಯ್ಯೋ ತಗಡೇ, ನಿನಗೆ ‘ರಾಬರ್ಟ್’ ಕಥೆ ಕೊಟ್ಟಿದ್ದೇ ನಾವು, ಟೈಟಲ್ ಕೊಟ್ಟಿದ್ದೇ ನಾನು ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದರು.ನೀನು ಕಥೆ ಮಾಡಿಸಿದೆ ಅಲ್ವಾ? ಹಾಗಾದ್ರೆ ಇಂತಹ ಒಳ್ಳೆ ಕಥೆ ಯಾಕೆ ಬಿಟ್ಟೆ? ನಿನ್ನ ಜಡ್ಜ್ಮೆಂಟ್ ಅಷ್ಟು ಚೆನ್ನಾಗಿದೆ ಅಂದರೆ ನೀನು ಮಾಡಬಹುದಿತ್ತಲ್ಲ..ಸುಮ್ಮನೆ ಮಾತನಾಡಬಾರದು….ಆಧಾರ ಇಟ್ಟುಕೊಂಡು ಮಾತನಾಡಬೇಕು..ಎಂದು ನಟ ದರ್ಶನ್ ಹೇಳಿದರು.

ಕಾಟೇರ’ ಹಿಟ್ ಆದ ಬಳಿಕ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಸಂದರ್ಶನಗಳಲ್ಲಿ ಮಾತನಾಡಿದ್ದರು. “ಕಾಟೇರ ಸಿನಿಮಾ ಚೆನ್ನಾಗಿ ಬಂದಿದೆ. ಕಥೆ ಬರೆಸಿದವನು ನಾನು. ತೆರೆಮೇಲೆ ಚೆನ್ನಾಗಿ ಬಂದಿದೆ. ನನಗೆ ಸಿನಿಮಾ ನೋಡಲು ಆಗಲಿಲ್ಲ ಎಂದಿದ್ದರು.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...