alex Certify BREAKING : ಬೆಂಗಳೂರಲ್ಲಿ ನಿಲ್ಲದ ಪುಂಡರ ಅಟ್ಟಹಾಸ : ಕಾರು ಜಖಂಗೊಳಿಸಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ಗ್ಯಾಂಗ್.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ನಿಲ್ಲದ ಪುಂಡರ ಅಟ್ಟಹಾಸ : ಕಾರು ಜಖಂಗೊಳಿಸಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ಗ್ಯಾಂಗ್.!

ಬೆಂಗಳೂರು : ಬೆಂಗಳೂರಲ್ಲಿ ಪುಂಡರ ಅಟ್ಟಹಾಸ ಮುಂದುವರೆದಿದ್ದು, ಕಾರು ಜಖಂಗೊಳಿಸಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಶಿವಲಿಂಗೇಗೌಡ ಎಂಬುವವರ ಮನೆ ಮುಂದೆ 4-5 ಜನರ ಗ್ಯಾಂಗ್ ಒಂದು ನಿನ್ನೆ ರಾತ್ರಿ ಮದ್ಯಪಾನ ಮಾಡುತ್ತಿತ್ತು. ಮನೆ ಬಳಿ ಮದ್ಯಪಾನ ಮಾಡುತಿದ್ದ ಕಾರಣಕ್ಕೆ ಇದನ್ನು ಪ್ರಶ್ನಿಸಲು ಹೋದ ಶಿವಲಿಂಗೇಗೌಡ ಹಾಗೂ ಮಹಿಳೆ ಓರ್ವರ ಮೇಲೆ ಗ್ಯಾಂಗ್ ಹಲ್ಲೆ ನಡೆಸಿದೆ.

ಅಲ್ಲದೇ ಮನೆ ಬಳಿ ನಡೆಸಿದ್ದ ಇನ್ನೋವಾ ಕಾರಿನ ಮೇಲೆ ಕಲ್ಲು ತೂರಿ ಕಾರನ್ನು ಜಖಂಗೊಳಿಸಿದ್ದಾರೆ. ಘಟನೆಯಲ್ಲಿ ಶಿವಲಿಂಗೇಗೌಡ ಅವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...