alex Certify ಪ್ರಯಾಣಿಕರೇ ಗಮನಿಸಿ: ಕಾಮಗಾರಿ ಹಿನ್ನೆಲೆ ಕೆಲ ರೈಲು ರದ್ದು, ಹಲವು ರೈಲು ಸೇವೆಗಳಲ್ಲಿ ಬದಲಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಯಾಣಿಕರೇ ಗಮನಿಸಿ: ಕಾಮಗಾರಿ ಹಿನ್ನೆಲೆ ಕೆಲ ರೈಲು ರದ್ದು, ಹಲವು ರೈಲು ಸೇವೆಗಳಲ್ಲಿ ಬದಲಾವಣೆ

ಬೆಂಗಳೂರು: ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಗಳ ನಡುವೆ ರಸ್ತೆ ಕೆಳ ಸೇತುವೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಲವು ರೈಲು ಸೇವೆಗಳಲ್ಲಿ ಬದಲಾವಣೆ ಮತ್ತು ಭಾಗಶಃ ರದ್ದು ಮಾಡಲಾಗಿದೆ.

ಫೆಬ್ರವರಿ 24, 27ರಂದು ಬಂಗಾರಪೇಟೆ -ಕೆಎಸ್ಆರ್ ಬೆಂಗಳೂರು(16521) ಮೆಮು ರೈಲು ಬೈಯ್ಯಪ್ಪನಹಳ್ಳಿಯಲ್ಲಿ ಕೊನೆಗೊಳ್ಳತ್ತದೆ.

ಫೆಬ್ರವರಿ 24 ಮತ್ತು 27ರಂದು ಹೊಸಪೇಟೆ- ಕೆಎಸ್ಆರ್ ಬೆಂಗಳೂರು(56520) ಡೈಲಿ ಪ್ಯಾಸೆಂಜರ್ ರೈಲು ಯಶವಂತಪುರದಲ್ಲಿ ನಿಲುಗಡೆಯಾಗಲಿದೆ.

ಫೆಬ್ರವರಿ 25 ಮತ್ತು 28 ರಂದು ಕೆಎಸ್ಆರ್ ಬೆಂಗಳೂರು -ಎಸ್ಎಸ್ಎಸ್ ಹುಬ್ಬಳ್ಳಿ ಎಕ್ಸ್ಪ್ರೆಸ್ ರೈಲು ಕೆಎಎಸ್ಆರ್ ಬೆಂಗಳೂರು ಬದಲು ಯಶವಂತಪುರದಿಂದ ಹೊರಡಲಿದೆ.

ಫೆಬ್ರವರಿ 23 ಮತ್ತು 26ರಂದು ಹೊರಡುವ ಎಸ್ಎಸ್ಎಸ್ ಹುಬ್ಬಳ್ಳಿ- ಕೆಎಸ್ಆರ್ ಬೆಂಗಳೂರು 07339 ಡೈಲಿ ಎಕ್ಸ್ಪ್ರೆಸ್ ವಿಶೇಷ ರೈಲು ಯಶವಂತಪುರದಲ್ಲಿ ಕೊನೆಗೊಳ್ಳುತ್ತದೆ.

ಫೆಬ್ರವರಿ 24 ಮತ್ತು 27 ರಂದು ಹೊರಡುವ ಕೆಎಸ್ಆರ್ ಬೆಂಗಳೂರು- ಎಸ್ಎಸ್ ಹುಬ್ಬಳ್ಳಿ ಡೈಲಿ ಎಕ್ಸ್ ಪ್ರೆಸ್ ವಿಶೇಷ ರೈಲು ಯಶವಂತಪುರದಿಂದ ಹೊರಡಲಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...