alex Certify BIG NEWS: ‘ಮೊಂಡಾಟ’ ಪದ ಬಳಸಿದ ಸಿಎಂ ವಿರುದ್ಧ ಬಿ.ಎಸ್ ಯಡಿಯೂರಪ್ಪ ಗರಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ‘ಮೊಂಡಾಟ’ ಪದ ಬಳಸಿದ ಸಿಎಂ ವಿರುದ್ಧ ಬಿ.ಎಸ್ ಯಡಿಯೂರಪ್ಪ ಗರಂ

ಬೆಂಗಳೂರು: ವಿಧಾನಸಭೆಯ ಕಲಾಪದ  ವೇಳೆ  ವಿಪಕ್ಷ ಬಿಜೆಪಿ ಪ್ರತಿಭಟನೆಗೆ ಗರಂ ಆಗಿದ್ದ ಸಿಎಂ ಸಿದ್ದರಾಮಯ್ಯ ಬಿಜೆಪಿ ’ಮೊಂಡಾಟ’ ಮಾಡುವುದನ್ನು ಬಿಡಲಿ ಎಂದು ಗುಡುಗಿದ್ದರು. ಇದೀಗ ಸಿಎಂ ‘ಮೊಂಡಾಟ’ ಪದ ಬಳಕೆ ವಿರುದ್ಧ ಬಿಜೆಪಿ ನಾಯಕರು ಮುಗಿ ಬಿದ್ದು ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಹೇಳಿಕೆಗೆ ಕಿಡಿಕಾರಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿಗಳು ಬೇಜವಾಬ್ದಾರಿಯಿಂದ ಮಾತನಾಡುವುದನ್ನು ನಿಲ್ಲಿಸಬೇಕು. ಜನರಿಗೆ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ತಕ್ಷಣ ಜಾರಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಸಿಎಂ ಮನಬಂದಂತೆ ಮಾತನಾಡುತ್ತಿರುವುದು ಬೇಜವಾಬ್ದಾರಿತನದ ಪರಮಾವಧಿ. ಇದನ್ನು ನಾವು ಇಲ್ಲಿಗೆ ನಿಲ್ಲಿಸಲ್ಲ. ಜಿಲ್ಲೆ ಜಿಲ್ಲೆಗಳಿಗೆ ಹೋಗಿ ಹೋರಾಟ ಮಾಡುತ್ತೇವೆ. ಕೊಟ್ಟ ಭರವಸೆಯನ್ನು ಕಾಂಗ್ರೆಸ್ ಮೊದಲು ಈಡೇರಿಸಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...