alex Certify ಕುಟುಂಬ ಸಮೇತ ಮಂತ್ರಾಲಯ ರಾಯರ ಮಠಕ್ಕೆ ಯಡಿಯೂರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುಟುಂಬ ಸಮೇತ ಮಂತ್ರಾಲಯ ರಾಯರ ಮಠಕ್ಕೆ ಯಡಿಯೂರಪ್ಪ

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ಭೇಟಿ ನೀಡಿದ್ದಾರೆ. ಸಂಸದ ಬಿ.ವೈ. ರಾಘವೇಂದ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಕುಟುಂಬ ಸಮೇತರಾಗಿ ಯಡಿಯೂರಪ್ಪ ಮಂತ್ರಾಲಯಕ್ಕೆ ತೆರಳಿ ಗುರು ರಾಘವೇಂದ್ರರ ದರ್ಶನ ಪಡೆದುಕೊಂಡಿದ್ದಾರೆ. ಇದೇ ವೇಳೆ ಅವರು ಮಂತ್ರಾಲಯ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ರಾಜ್ಯ, ದೇಶದಲ್ಲಿ ಅತಿವೃಷ್ಠಿ, ಅನಾವೃಷ್ಠಿಯಿಂದ ಹಾನಿಯಾಗಿದ್ದು, ರೈತರು ಸ್ವಾಭಿಮಾನದಿಂದ ಬದುಕಲು ರಾಯರು ಆಶೀರ್ವಾದ ಮಾಡಬೇಕು. ತಂದೆಯವರು, ನಾವೆಲ್ಲರೂ ಸಾರ್ವಜನಿಕ ಸೇವೆ ಮಾಡಲು ಆಶೀರ್ವದಿಸಬೇಕೆಂದು ಕುಟುಂಬ ಸಮೇತರಾಗಿ ಕೇಳಿಕೊಂಡಿದ್ದೇವೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...