alex Certify ಯಡಿಯೂರಪ್ಪ ಪರ ಶಾಮನೂರು ಬ್ಯಾಟಿಂಗ್: ದರ್ಶನ್ ವಿರುದ್ಧ ಕ್ರಮಕ್ಕೆ ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯಡಿಯೂರಪ್ಪ ಪರ ಶಾಮನೂರು ಬ್ಯಾಟಿಂಗ್: ದರ್ಶನ್ ವಿರುದ್ಧ ಕ್ರಮಕ್ಕೆ ಆಗ್ರಹ

ದಾವಣಗೆರೆ: ಯಾರೋ ದೂರು ಕೊಟ್ಟ ಮಾತ್ರಕ್ಕೆ ಬಂಧನ ಎಂದರೆ ಹೇಗೆ? ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಬ್ಯಾಟಿಂಗ್ ನಡೆಸಿದ್ದಾರೆ.

ಯಡಿಯೂರಪ್ಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶಾಮನೂರು ಶಿವಶಂಕರಪ್ಪ, ಆರೋಪ ಸಾಬೀತಾದ ಮೇಲೆ ಬಂಧಿಸುವುದು ಅಂದರೆ ಸರಿ. ಯಾರೋ ಹೆಣ್ಣುಮಗಳು ದೂರು ಕೊಟ್ಟ ಮಾತ್ರಕ್ಕೆ ಬಂಧನ ಅಂದರೆ ಹೇಗೆ? ಇದಕ್ಕೆ ಅರ್ಥ ಇದೆಯೇ ಎಂದು ಪ್ರಶ್ನಿಸಿದ್ದಾರೆ.

ಯಾರೋ ದಾರಿಯಲ್ಲಿ ಹೋಗುವವರು ದೂರು ಕೊಟ್ರೆ ಅರೆಸ್ಟ್ ಅಂದರೆ ಏನು ಅರ್ಥ? ಆ ಮಹಿಳೆ 55 ಜನರ ವಿರುದ್ಧವೂ ದೂರು ನೀಡಿದ್ದಾರೆ. ಇಂತಹುದಕ್ಕೆ ಬೆಲೆ ಇದೆ ಎಂದು ಪ್ರಶ್ನಿಸಿದ್ದಾರೆ.

ನಟ ದರ್ಶನ್ ಮಾಡಿದ್ದು ತಪ್ಪು. ಯಾರೂ ಕೂಡ ಕಾನೂನು ಕೈಗೆ ತೆಗೆದುಕೊಳ್ಳಬಾರದು. ಬುದ್ಧಿ ಹೇಳಿ ಕಳುಹಿಸಬೇಕಿತ್ತು. ಅದನ್ನು ಬಿಟ್ಟು ಸಾಯುವ ಹಾಗೆ ಹೊಡೆಯಬಾರದಿತ್ತು. ದರ್ಶನ್ ಮೇಲೆ ಕ್ರಮ ಕೈಗೊಳ್ಳುವಂತೆ ಅಖಿಲ ಭಾರತ ವೀರಶೈವ ಮಹಾಸಭಾದಿಂದ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...