alex Certify BREAKING NEWS: ಕುರಿಗಾಹಿ ಮೇಲೆ ಹರಿದ ಸರ್ಕಾರಿ ಬಸ್; ಕುರಿಗಾಹಿ ಹಾಗೂ 20 ಕುರಿಗಳು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕುರಿಗಾಹಿ ಮೇಲೆ ಹರಿದ ಸರ್ಕಾರಿ ಬಸ್; ಕುರಿಗಾಹಿ ಹಾಗೂ 20 ಕುರಿಗಳು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಬೆಳ್ಳಂ ಬೆಳಿಗ್ಗೆ ಮತ್ತೊಂದು ಭೀಕರ ಅಪಘಾತ ಸಂಭವಿಸುಇದ್ದು, ಕುರಿ ಹಿಂಡಿನೊಂದಿಗೆ ತೆರಳುತ್ತಿದ್ದ ಕುರಿಗಾಹಿ ಮೇಲೆಯೇ ಸರ್ಕಾರಿ ಬಸ್ ಹರಿದಿದ್ದು, ಕುರಿಗಾಹಿ ಹಾಗೂ 20 ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಕುರಿಮೇಯಿಸಲೆಂದು ತೆರಳುತ್ತಿದ್ದ ವೇಳೆ ಚಿತ್ರದುರ್ಗ ತಾಲೂಕಿನ ಈರಜ್ಜನಹಟ್ಟಿಯಲ್ಲಿ ಈ ದುರಂತ ಸಂಭವಿಸಿದೆ. ನೆಲಗೇತನಹಟ್ಟಿಯ ಕುರಿಗಾಹಿ ರಾಜಪ್ಪ (30) ಮೃತ ಕುರಿಗಾಹಿ.

ಅಪಘಾತದಲ್ಲಿ ರಾಜಪ್ಪಗೆ ಸೇರಿದ 20 ಕುರಿಗಳು ಸಾವನ್ನಪ್ಪಿವೆ. ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...