alex Certify BREAKING: ಬಸ್ ಅಡ್ಡಗಟ್ಟಿ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬಸ್ ಅಡ್ಡಗಟ್ಟಿ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ

ಹುಬ್ಬಳ್ಳಿಯ ಬಿಡ್ನಾಳ ಬಳಿ ಸರ್ಕಾರಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಲಾಗಿದೆ. ಶಿವಾನಂದ ಪೂಜಾರ ಅವರ ಮೇಲೆ ಮೂವರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

ಸೈಡ್ ಕೊಡಿ ಎಂದು ಕೇಳಿದ್ದಕ್ಕೆ ಬಸ್ ಗೆ ಚಕ್ಕಡಿ ಅಡ್ಡ ನಿಲ್ಲಿಸಿ ಚಾಲಕನ ಮೇಲೆ ಹಲ್ಲೆ ನಡೆಸಲಾಗಿದೆ. ಹಲ್ಲೆಗೊಳಗಾದ ಶಿವಾನಂದ ಬೆಂಡಿಗೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಠಕ್ಕನಗೌಡ ಪಾಟೀಲ, ಅಣ್ಣಪ್ಪ, ಮಾರುತಿ ಹಳ್ಳಿಕೇರಿ ವಿರುದ್ಧ ದೂರು ನೀಡಲಾಗಿದೆ. ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಬಸ್ ಚಾಲಕರ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಒಂದೇ ದಿನ ಹುಬ್ಬಳ್ಳಿಯಲ್ಲಿ ಚಾಲಕರ ಮೇಲಿನ ಹಲ್ಲೆ ಸಂಬಂಧ ಎರಡು ಪ್ರಕರಣ ದಾಖಲಾಗಿವೆ.

ವಿದ್ಯಾನಗರ ವ್ಯಾಪ್ತಿಯಲ್ಲೂ ಚಿಗರಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಲಾಗಿದೆ. ಚಿಗರಿ ಬಸ್ ಚಾಲಕ ಶಿವಪುತ್ರಪ್ಪ ಚವಡಿ ಅವರ ಮೇಲೆ ಯುವಕರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಮುಂದೆ ಹಲ್ಲೆ ನಡೆಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...