alex Certify ಚಲಿಸುತ್ತಿದ್ದ ಬಸ್ ಗೆ ಬೆಂಕಿ: ಪ್ರಯಾಣಿಕ ಸಜೀವದಹನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಲಿಸುತ್ತಿದ್ದ ಬಸ್ ಗೆ ಬೆಂಕಿ: ಪ್ರಯಾಣಿಕ ಸಜೀವದಹನ

ಕೊಲ್ಹಾಪುರ: ಚಲಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಓರ್ವ ಪ್ರಯಾಣಿಕ ಸಚಿವ ದಹನವಾಗಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.

ಕೊಲ್ಹಾಪುರದಲ್ಲಿ ಶುಕ್ರವಾರ ತಡರಾತ್ರಿ ಘಟನೆ ನಡೆದಿದೆ. ಬೆಳಗಾವಿಯಿಂದ ಪುಣೆಗೆ ತೆರಳುತ್ತಿದ್ದ ಬಸ್ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಬಸ್ ಚಲಿಸುವಾಗ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇದನ್ನು ಗಮನಿಸಿದ ಚಾಲಕ, ಕಂಡಕ್ಟರ್ ಪರಾರಿಯಾಗಿದ್ದಾರೆ. ಬೆಂಕಿ ತಗುಲಿದ ವೇಳೆ ಬಸ್ ನಿಂದ ಇಳಿಯುವಾಗ 6 ಪ್ರಯಾಣಿಕರಿಗೆ ಸುಟ್ಟ ಗಾಯಗಳಾಗಿವೆ. ನಿದ್ದೆ ಮಾಡುತ್ತಿದ್ದ ಪ್ರಯಾಣಿಕ ಸಜೀವದಹನವಾಗಿದ್ದಾರೆ. ಬಸ್ ನಲ್ಲಿ 30 ಪ್ರಯಾಣಿಕರಿದ್ದರು. ಮಾಹಿತಿ ತಿಳಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಶಿರಗಾಂವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...