alex Certify BREAKING NEWS: ನಿಗೂಢವಾಗಿ ನಾಪತ್ತೆಯಾಗಿದ್ದ ಬಸ್ ಮಾಲೀಕನ ಶವ ಪತ್ತೆ, ಕೊರೋನಾ ಲಾಕ್ ಡೌನ್ ನಿಂದ ಸಂಕಷ್ಟ, ಸಾಲಬಾಧೆಯಿಂದ ಆತ್ಮಹತ್ಯೆ ಶಂಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ನಿಗೂಢವಾಗಿ ನಾಪತ್ತೆಯಾಗಿದ್ದ ಬಸ್ ಮಾಲೀಕನ ಶವ ಪತ್ತೆ, ಕೊರೋನಾ ಲಾಕ್ ಡೌನ್ ನಿಂದ ಸಂಕಷ್ಟ, ಸಾಲಬಾಧೆಯಿಂದ ಆತ್ಮಹತ್ಯೆ ಶಂಕೆ

ಶಿವಮೊಗ್ಗ: ಶುಕ್ರವಾರದಿಂದ ನಾಪತ್ತೆಯಾಗಿದ್ದ ಸಾಗರದ ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಪ್ರಕಾಶ್ ಅವರ ಮೃತದೇಹ ಇಂದು ಬೆಳಿಗ್ಗೆ ಪತ್ತೆಯಾಗಿದೆ.

ಹೊಸನಗರ ತಾಲೂಕಿನ ಪಟಗುಪ್ಪ ಸೇತುವೆ ಬಳಿ ಅವರ ಕಾರ್ ಮತ್ತು ಮೊಬೈಲ್ ಕಂಡುಬಂದಿದ್ದು, ಮೂರ್ನಾಲ್ಕು ದಿನಗಳಿಂದ ಹುಡುಕಾಟ ನಡೆಸಲಾಗಿತ್ತು.

ಕೊರೋನಾ ಕಾರಣದಿಂದಾಗಿ ಪ್ರಕಾಶ್ ಟ್ರಾವೆಲ್ಸ್ ಸಂಕಷ್ಟಕ್ಕೆ ಸಿಲುಕಿತ್ತು. ಸಂಸ್ಥೆಯ ಮಾಲೀಕರಾದ ಪ್ರಕಾಶ್ ಸಾಲಗಾರರ ಕಾಟದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸುಮಾರು 20 ವರ್ಷಗಳಿಂದ ಸಾರಿಗೆ ಉದ್ಯಮದಲ್ಲಿದ್ದ ಪ್ರಕಾಶ್ ಲಾಕ್ ಡೌನ್ ನಂತರ ಸಂಕಷ್ಟಕ್ಕೆ ಸಿಲುಕಿದ್ದರು. ಶುಕ್ರವಾರದಿಂದ ನಾಪತ್ತೆಯಾಗಿದ್ದ ಅವರಿಗಾಗಿ ಹುಡುಕಾಟ ನಡೆಸಲಾಗಿತ್ತು. ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...