alex Certify ನಿಗೂಢವಾಗಿ ನಾಪತ್ತೆಯಾದ ಬಸ್ ಮಾಲೀಕನಿಗೆ 4 ದಿನಗಳಿಂದ ಹುಡುಕಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಗೂಢವಾಗಿ ನಾಪತ್ತೆಯಾದ ಬಸ್ ಮಾಲೀಕನಿಗೆ 4 ದಿನಗಳಿಂದ ಹುಡುಕಾಟ

ಶಿವಮೊಗ್ಗ:  ಶುಕ್ರವಾರದಿಂದ ನಾಪತ್ತೆಯಾಗಿರುವ ಸಾಗರದ ಪ್ರಕಾಶ್ ಟ್ರಾವೆಲ್ಸ್ ಬಸ್ ಸಂಸ್ಥೆಯ ಮಾಲೀಕ ಪ್ರಕಾಶ್ ಅವರಿಗಾಗಿ ಹುಡುಕಾಟ ಮುಂದುವರೆದಿದೆ.

ಹೊಸನಗರ ತಾಲೂಕಿನ ಪಟಗುಪ್ಪ ಸೇತುವೆ ಬಳಿ ಅವರಿಗಾಗಿ ಶೋಧ ಕಾರ್ಯ ಮುಂದುವರೆದಿದ್ದು, ಇದುವರೆಗೂ ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಶಾಸಕ ಹರತಾಳು ಹಾಲಪ್ಪ ಭೇಟಿ ನೀಡಿ, ಈಗಾಗಲೇ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಚರ್ಚೆ ನಡೆಸಿದ್ದು, ಪ್ರಕಾಶ್ ಅವರ ಪತ್ತೆಗಾಗಿ ಎಲ್ಲ ಪ್ರಯತ್ನ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಬಸ್ ಮಾಲೀಕರು ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಚಾಲಕರು, ನಿರ್ವಾಹಕರು, ಸಿಬ್ಬಂದಿ ಸೇರಿ 250ಕ್ಕೂ ಅಧಿಕ ಮಂದಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ನಿಗೂಢವಾಗಿ ನಾಪತ್ತೆಯಾಗಿರುವ ಬಸ್ ಮಾಲೀಕರ ಹುಡುಕಿಕೊಡಬೇಕೆಂದು ಒತ್ತಾಯಿಸಿದ್ದಾರೆ. ಪ್ರಕಾಶ್ ಅವರ ನಾಪತ್ತೆ ಹಿಂದೆ ಕಾಣದ ವ್ಯಕ್ತಿಗಳ ಕೈವಾಡ ಇರುವ ಶಂಕೆ ಇದ್ದು, ತನಿಖೆ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಪಟಗುಪ್ಪ ಸೇತುವೆ ಶರಾವತಿ ಹಿನ್ನೀರಿಗೆ ಅಡ್ಡಲಾಗಿ ಕಟ್ಟಲಾಗಿದೆ. ಈ ಸ್ಥಳದಲ್ಲಿ ಪ್ರಕಾಶ್ ಅವರ ಕಾರು ಪತ್ತೆಯಾಗಿದೆ. ಅವರಿಗಾಗಿ ಹುಡುಕಾಟ ಮುಂದುವರೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...