alex Certify ಉದ್ಯಮಿಗೆ ಚಾಕುವಿನಿಂದ ಇರಿದು ಪತ್ನಿ ಕಟ್ಟಿ ಹಾಕಿ ದರೋಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯಮಿಗೆ ಚಾಕುವಿನಿಂದ ಇರಿದು ಪತ್ನಿ ಕಟ್ಟಿ ಹಾಕಿ ದರೋಡೆ

ಮಂಗಳೂರು: ಮಂಗಳೂರು ಹೊರವಲಯದ ಉಳಾಯಿಬಿಟ್ಟು ಬಳಿ ಲೋಕೋಪಯೋಗಿ ಇಲಾಖೆ ಗುತ್ತಿಗೆದಾರ ಪದ್ಮನಾಭ ಕೋಟ್ಯಾನ್ ಅವರ ಮನೆಗೆ ನುಗ್ಗಿದ ದರೋಡೆಕೋರರು ನಗದು, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.

ಪದ್ಮನಾಭ ಅವರಿಗೆ ಚಾಕುವಿನಿಂದ ಇರಿದು ಪತ್ನಿ ಹಾಗೂ ಮನೆಯವರನ್ನು ಕಟ್ಟಿ ಹಾಕಿ ದರೋಡೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದರೋಡೆಕೋರರ ಬಗ್ಗೆ ಮಾಹಿತಿ ಕಲೆ ಹಾಕಿ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ.

ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಉಳಾಯಿಬೆಟ್ಟು ಬಳಿ ಪದ್ಮನಾಭ ಕೋಟ್ಯಾನ್ ಅವರ ಫಾರ್ಮ್ ಹೌಸ್ ಗೆ ನುಗ್ಗಿದ ದರೋಡೆಕೋರರು ಮುಸುಕು ಧರಿಸಿದ್ದರು. ಹಿಂದಿಯಲ್ಲಿ ಮಾತನಾಡುತ್ತಿದ್ದರು ಎನ್ನಲಾಗಿದೆ. ಪದ್ಮನಾಭ ಅವರ ಕೈಗೆ ಚಾಕುವಿನಿಂದ ಇರಿದು ಕುಟುಂಬ ಸದಸ್ಯರನ್ನು ಕಟ್ಟಿಹಾಕಿ ಮನೆಯಲ್ಲಿದ್ದ ನಗದು, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ ಗಾಯಗೊಂಡ ಪದ್ಮನಾಭ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...