alex Certify ಹೊಸ ವರ್ಷದ ಮೊದಲ ದಿನವೇ ದುರಂತ: ಸಂಸದ ಬಿ.ವೈ. ರಾಘವೇಂದ್ರ ಫೋಟೋಗ್ರಾಫರ್ ಕೆರೆಯಲ್ಲಿ ಮುಳುಗಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸ ವರ್ಷದ ಮೊದಲ ದಿನವೇ ದುರಂತ: ಸಂಸದ ಬಿ.ವೈ. ರಾಘವೇಂದ್ರ ಫೋಟೋಗ್ರಾಫರ್ ಕೆರೆಯಲ್ಲಿ ಮುಳುಗಿ ಸಾವು

ರಾಮನಗರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸದಸ್ಯ ಬಿ.ವೈ. ರಾಘವೇಂದ್ರ ಅವರ ಫೋಟೋಗ್ರಾಫರ್ ಪ್ರಸನ್ನಭಟ್(25) ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಹೊಸ ವರ್ಷದ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲೆಯ ಕನಕಪುರಕ್ಕೆ ಆಗಮಿಸಿದ್ದ ಪ್ರಸನ್ನ ಭಟ್ ತಮ್ಮ ಸ್ನೇಹಿತ ಕೌಶಿಕ್ ಅವರೊಂದಿಗೆ ಮಾವತ್ತೂರು ಕೆರೆಯಲ್ಲಿ ಈಜಲು ಹೋಗಿದ್ದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸಂಸದ ರಾಘವೇಂದ್ರ ದೆಹಲಿಗೆ ತೆರಳಿದ್ದ ಹಿನ್ನೆಲೆಯಲ್ಲಿ ಪ್ರಸನ್ನ ಭಟ್ ಕನಕಪುರದಲ್ಲಿದ್ದ ಸ್ನೇಹಿತ ಕೌಶಿಕ್ ಮನೆಗೆ ಬಂದಿದ್ದಾರೆ. ಸ್ನೇಹಿತರು ಮಾವತ್ತೂರು ಕೆರೆಯಲ್ಲಿ ಈಜಲು ಹೋಗಿದ್ದು, ಕಾಲು ಜಾರಿ ನೀರಿಗೆ ಬಿದ್ದ ಪ್ರಸನ್ನಭಟ್ ನೀರಿನಿಂದ ಮೇಲೆ ಬರದೆ ಮೃತಪಟ್ಟಿದ್ದಾರೆ. ಕನಕಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...