alex Certify ಪಿಎಫ್ಐ ಕಾಂಗ್ರೆಸ್ ಪಾಪದ ಕೂಸು: ಅಪಪ್ರಚಾರವೇ ಆ ಪಕ್ಷಕ್ಕೆ ತಿರುಗುಬಾಣ: ವಿಜಯೇಂದ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಎಫ್ಐ ಕಾಂಗ್ರೆಸ್ ಪಾಪದ ಕೂಸು: ಅಪಪ್ರಚಾರವೇ ಆ ಪಕ್ಷಕ್ಕೆ ತಿರುಗುಬಾಣ: ವಿಜಯೇಂದ್ರ

ಕಲಬುರಗಿ: ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ನನ್ನ ಹಣೆಬರಹದಲ್ಲಿ ಇರುವುದನ್ನು ಯಾರೂ ತಪ್ಪಿಸಲು ಆಗುವುದಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಪಕ್ಷ ನೀಡಿದ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ. ನಾನು ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಗೆಲ್ಲುತ್ತೇನೆ. ನಮ್ಮ ಪಕ್ಷಕ್ಕೆ ನನ್ನನ್ನು ಗೆಲ್ಲಿಸುವ ಶಕ್ತಿ ಇದೆ ಎಂದು ಕಲ್ಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ ಹೇಳಿದ್ದಾರೆ.

ಪಿಎಫ್ಐ ಸಂಘಟನೆ ಕಾಂಗ್ರೆಸ್ ಪಕ್ಷದ ಪಾಪದ ಕೂಸು ಎಂದು ಅವರು ಟೀಕಿಸಿದ್ದಾರೆ. ಇನ್ನಾದರೂ ಕಾಂಗ್ರೆಸ್ ಪಕ್ಷ ತನ್ನ ತಪ್ಪಿನ ಬಗ್ಗೆ ಅರಿತುಕೊಳ್ಳಲಿ. ಆರ್.ಎಸ್.ಎಸ್. ನಿಷೇಧಿಸಿ ಎನ್ನುವುದು ಮೂರ್ಖತನದ ಹೇಳಿಕೆಯಾಗಿದೆ. ನಮ್ಮ ಸರ್ಕಾರದ ಬಗ್ಗೆ ‘ಪೇ ಸಿಎಂ’ ಎಂದು ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ. ಅಧಿಕಾರಕ್ಕೆ ಬರಲು ಕಾಂಗ್ರೆಸ್ ನಿಂದ ಆಧಾರ ರಹಿತ ಆರೋಪ ಮಾಡಲಾಗುತ್ತಿದೆ. ಅಪಪ್ರಚಾರವೇ ಕಾಂಗ್ರೆಸ್ ಪಕ್ಷಕ್ಕೆ ತಿರುಗುಬಾಣವಾಗುತ್ತದೆ ಎಂದರು.

ಕಾಂಗ್ರೆಸ್ ಯಾವುದೇ ಪಾದಯಾತ್ರೆ ಮಾಡಿದರೂ ಅಧಿಕಾರಕ್ಕೆ ಬರುವುದಿಲ್ಲ ಎಂದ ಅವರು, ‘ಭಾರತ್ ಜೋಡೋ ಯಾತ್ರೆ’ಯ ಬ್ಯಾನರ್ ಹರಿದು ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ಪಕ್ಷದವರೇ ಪ್ರಚಾರಕ್ಕೆ ಬ್ಯಾನರ್ ಹರಿದು ಹಾಕಿರಬಹುದು. ಬಿಜೆಪಿ ಬ್ಯಾನರ್ ಹರಿಯುವಂತಹ ಕೀಳು ಮಟ್ಟದ ಕೆಲಸ ಮಾಡುವುದಿಲ್ಲ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...