alex Certify BIG NEWS: ವಿಧಾನಸಭೆ ಚುನಾವಣೆಗೆ ವಿಜಯೇಂದ್ರ ಎಚ್ಚರಿಕೆಯ ಹೆಜ್ಜೆ: ಅವಕಾಶವಿರುವ ಕ್ಷೇತ್ರಗಳಲ್ಲಿ ಹೆಚ್ಚು ಪ್ರವಾಸ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಧಾನಸಭೆ ಚುನಾವಣೆಗೆ ವಿಜಯೇಂದ್ರ ಎಚ್ಚರಿಕೆಯ ಹೆಜ್ಜೆ: ಅವಕಾಶವಿರುವ ಕ್ಷೇತ್ರಗಳಲ್ಲಿ ಹೆಚ್ಚು ಪ್ರವಾಸ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ಲಾನ್ ಮಾಡಿಕೊಂಡಿದ್ದಾರೆ.

ಎಚ್ಚರಿಕೆಯ ಹೆಜ್ಜೆ ಇಡಲು ಮುಂದಾಗಿರುವ ವಿಜಯೇಂದ್ರ ತಮ್ಮ ಸ್ಪರ್ಧೆಯ ಬಗ್ಗೆ ಹೈಕಮಾಂಡ್ ಯಾವ ನಿಲುವು ಬಂದಿದೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಚಿಂತನೆ ನಡೆಸಿದ್ದಾರೆ. ಸ್ಪರ್ಧೆಗೆ ವರಿಷ್ಠರ ಗ್ರೀನ್ ಸಿಗ್ನಲ್ ಪಡೆದುಕೊಂಡು ರಾಜ್ಯ ಪ್ರವಾಸ ಕೈಗೊಳ್ಳಲು ಮುಂದಾಗಿದ್ದಾರೆ.

ರಾಜ್ಯದಲ್ಲಿ ಪ್ರವಾಸ ಕೈಗೊಂಡು ಪಕ್ಷವನ್ನು ಸಂಘಟಿಸಲು ಹೆಚ್ಚು ಗಮನಹರಿಸಲು ವಿಜಯೇಂದ್ರ ಮುಂದಾಗಿದ್ದಾರೆ. ಇದರೊಂದಿಗೆ ಸ್ಪರ್ಧೆಗೆ ಅವಕಾಶವಿರುವ ಭಾಗದಲ್ಲಿ ಹೆಚ್ಚಿನ ಪ್ರವಾಸ ನಡೆಸಲಿದ್ದಾರೆ. ವಿಧಾನಸಭೆಗೆ ಕೆಲವೇ ತಿಂಗಳು ಬಾಕಿ ಇರುವ ಹಿನ್ನೆಲೆಯಲ್ಲಿ ರಾಜಕೀಯ ಭವಿಷ್ಯ ಆಧರಿಸಿ ಪ್ರವಾಸ ಕೈಗೊಳ್ಳಲು ವಿಜಯೇಂದ್ರ ಪ್ಲಾನ್ ಮಾಡಿಕೊಂಡಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...