alex Certify BREAKING: ಪ್ರಚಾರಕ್ಕೆ ತೆರಳುತ್ತಿದ್ದ ವೇಳೆ ಮಾಜಿ ಸಚಿವ ಬೈರತಿ ಬಸವರಾಜ್ ಕಾರ್ ಪಲ್ಟಿ: ಅಪಘಾತದಲ್ಲಿ ಇಬ್ಬರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಪ್ರಚಾರಕ್ಕೆ ತೆರಳುತ್ತಿದ್ದ ವೇಳೆ ಮಾಜಿ ಸಚಿವ ಬೈರತಿ ಬಸವರಾಜ್ ಕಾರ್ ಪಲ್ಟಿ: ಅಪಘಾತದಲ್ಲಿ ಇಬ್ಬರಿಗೆ ಗಾಯ

ಯಾದಗಿರಿ: ಬಿಜೆಪಿ ಮುಖಂಡ, ಮಾಜಿ ಸಚಿವ ಭೈರತಿ ಬಸವರಾಜ್ ಗೆ ಸೇರಿದ ಕಾರ್ ಪಲ್ಟಿಯಾಗಿದೆ. ಅಪಘಾತವಾದ ಕಾರ್ ನಲ್ಲಿ ಬೈರತಿ ಬಸವರಾಜ್ ಪ್ರಯಾಣಿಸುತ್ತಿರಲಿಲ್ಲ. ಅವರು ಬೇರೆ ಕಾರ್ ನಲ್ಲಿ ತೆರಳುತ್ತಿದ್ದರು.

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕಾಮನಟಗಿ ಸಮೀಪ ಘಟನೆ ನಡೆದಿದೆ. ಅಪಘಾತದಲ್ಲಿ ಬೈರತಿ ಬಸವರಾಜ್ ಅವರ ಕಾರ್ ಚಾಲಕ ಮತ್ತು ಗನ್ ಮ್ಯಾನ್ ಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಹುಣಸಗಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಸುರಪುರ ಅಭ್ಯರ್ಥಿ ರಾಜೂಗೌಡ ಪರ ಮತಯಾಚನೆಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಹುಣಸಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...