alex Certify BIG NEWS: ಬಿಜೆಪಿಯಲ್ಲಿ ಭಾರೀ ಬದಲಾವಣೆ ಸಾಧ್ಯತೆ, ಕೊರೋನಾ ಹೊತ್ತಲ್ಲಿ ಸಕ್ರಿಯವಾಗಿಲ್ಲದ ಸಚಿವರು, ಪದಾಧಿಕಾರಿಗಳಿಗೆ ಗೇಟ್ ಪಾಸ್…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿಯಲ್ಲಿ ಭಾರೀ ಬದಲಾವಣೆ ಸಾಧ್ಯತೆ, ಕೊರೋನಾ ಹೊತ್ತಲ್ಲಿ ಸಕ್ರಿಯವಾಗಿಲ್ಲದ ಸಚಿವರು, ಪದಾಧಿಕಾರಿಗಳಿಗೆ ಗೇಟ್ ಪಾಸ್…?

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತಾದ ಚರ್ಚೆ ನಡೆದಿರುವ ಹೊತ್ತಲ್ಲೇ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ದಿಢೀರ್ ದೆಹಲಿಗೆ ತೆರಳಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರೊಂದಿಗೆ ರಹಸ್ಯ ಚರ್ಚೆ ನಡೆಸಿದ್ದಾರೆ.

ರಾಜ್ಯದಲ್ಲಿನ ರಾಜಕೀಯ ಬೆಳವಣಿಗೆಗಳ ಕುರಿತಾಗಿ ಅವರು ಸಮಾಲೋಚನೆ ನಡೆಸಿದ್ದು, ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಚಿವ ಸಂಪುಟ ಪುನಾರಚನೆ, ರಾಜ್ಯ ಬಿಜೆಪಿ ಪದಾಧಿಕಾರಿಗಳ ಬದಲಾವಣೆ ಕುರಿತಾಗಿ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ.

ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸದ, ಕ್ರಿಯಾಶೀಲವಾಗಿ ತೊಡಗಿಕೊಳ್ಳದ ಕೆಲವು ಸಚಿವರನ್ನು ಕೈಬಿಡಲಾಗುವುದು. ಸಂಕಷ್ಟದ ಹೊತ್ತಲ್ಲಿ ಆಸಕ್ತಿಯಿಂದ ಕೆಲಸ ಮಾಡಿದವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಕುರಿತಾಗಿ ಚರ್ಚೆ ನಡೆದಿದೆ.

ಕ್ರಿಯಾಶೀಲವಾಗಿಲ್ಲದ ಕೆಲವು ಸಚಿವರನ್ನು ಕೈಬಿಟ್ಟು ಸಂಪುಟ ಪುನರ್ ರಚಿಸುವ ಬಗ್ಗೆ ಚರ್ಚೆ ನಡೆದಿದೆ. ಅಲ್ಲದೇ, ಪಕ್ಷ ಅಧಿಕಾರದಲ್ಲಿದ್ದರೂ ಕೂಡ ಕೆಲವು ಸಚಿವರು ಮತ್ತು ಪದಾಧಿಕಾರಿಗಳು ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಿಲ್ಲ. ಸಂಕಷ್ಟದಲ್ಲಿದ್ದವರಿಗೆ ಸ್ಪಂದಿಸಿಲ್ಲ ಎನ್ನುವ ದೂರುಗಳು ಕೇಳಿಬಂದಿವೆ. ಬೆಡ್, ಔಷಧ, ಆಮ್ಲಜನಕ ತೀವ್ರ ಕೊರತೆ ಎದುರಾದ ಸಂದರ್ಭದಲ್ಲಿಯೂ ಅನೇಕರು ಗಮನಹರಿಸದ ಕಾರಣ ಅರುಣ್ ಸಿಂಗ್ ಅವರಿಗೆ ದೂರು ಬಂದಿವೆ. ಕ್ರಿಯಾಶೀಲವಲ್ಲದ ಸಚಿವರು ಮತ್ತು ಪದಾಧಿಕಾರಿಗಳನ್ನು ಬದಲಾಯಿಸುವ ಕುರಿತು ಚರ್ಚೆ ನಡೆದಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...