alex Certify ಸಂಪುಟ ವಿಸ್ತರಣೆಗೆ ಗರಿಗೆದರಿದ ಚಟುವಟಿಕೆ, ಸಿಎಂ ನಿವಾಸಕ್ಕೆ ಆಕಾಂಕ್ಷಿಗಳ ದೌಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಪುಟ ವಿಸ್ತರಣೆಗೆ ಗರಿಗೆದರಿದ ಚಟುವಟಿಕೆ, ಸಿಎಂ ನಿವಾಸಕ್ಕೆ ಆಕಾಂಕ್ಷಿಗಳ ದೌಡು

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ, ಪುನಾರಚನೆ ಮಾಡುವ ವಿಚಾರ ಗರಿಗೆದರಿದ್ದು, ಸಿಎಂ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಸಚಿವ ಸ್ಥಾನಾಕಾಂಕ್ಷಿಗಳು ಭೇಟಿ ನೀಡಿದ್ದಾರೆ.

ಬೆಂಗಳೂರಿನ ಆರ್.ಟಿ. ನಗರದ ಬೊಮ್ಮಾಯಿ ನಿವಾಸಕ್ಕೆ ವಿಧಾನಸಭಾ ಉಪಾಧ್ಯಕ್ಷ ಆನಂದ ಮಾಮನಿ ಭೇಟಿ ನೀಡಿದ್ದಾರೆ. ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಅವರು ಸಂಪುಟದಲ್ಲಿ ಅವಕಾಶ ನೀಡುವಂತೆ ಸಿಎಂಗೆ ಒತ್ತಡ ಹೇರಿದ್ದಾರೆ.

ವಿಧಾನಪರಿಷತ್ ಸದಸ್ಯ ಆರ್. ಶಂಕರ್ ಕೂಡ ಸಿಎಂ ನಿವಾಸಕ್ಕೆ ಭೇಟಿ ನೀಡಿ ಸಚಿವ ಸ್ಥಾನಕ್ಕೆ ತಮ್ಮ ಹೆಸರು ಪರಿಗಣಿಸುವಂತೆ ಮನವಿ ಮಾಡಿದ್ದಾರೆ. ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರೂ ಸಿಎಂ ನಿವಾಸಕ್ಕೆ ಭೇಟಿ ನೀಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಂಡಿದ್ದು, ಸಂಪುಟ ವಿಸ್ತರಣೆಗೆ ವರಿಷ್ಠರಿಂದ ಒಪ್ಪಿಗೆ ಪಡೆಯಲಿದ್ದಾರೆ. 4 ಸಚಿವ ಸ್ಥಾನಗಳು ಖಾಲಿ ಇದ್ದು, ಇವುಗಳನ್ನು ಭರ್ತಿ ಮಾಡುವ ಜೊತೆಗೆ ಪುನಾರಚನೆ ಮಾಡುವ ಸಾಧ್ಯತೆ ಇದೆ. ಕೆಲವು ಸಚಿವರನ್ನು ಕೈಬಿಟ್ಟು ಮುಂದಿನ ವಿಧಾನಸಭೆ ದೃಷ್ಠಿಯಲ್ಲಿಟ್ಟುಕೊಂಡು ಸಂಪುಟ ಪುನಾರಚನೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...