alex Certify ಸಚಿವ ಸ್ಥಾನಾಕಾಂಕ್ಷಿಗಳಿಗೆ ಸಂಕ್ರಾಂತಿ ಗಿಫ್ಟ್: ಜ. 13 ರಂದು ಸಂಪುಟ ವಿಸ್ತರಣೆ – ಮುನಿರತ್ನ, ಎಂಟಿಬಿ, ಶಂಕರ್ ಸೇರಿ 7 ಮಂದಿಗೆ ಸಚಿವ ಸ್ಥಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವ ಸ್ಥಾನಾಕಾಂಕ್ಷಿಗಳಿಗೆ ಸಂಕ್ರಾಂತಿ ಗಿಫ್ಟ್: ಜ. 13 ರಂದು ಸಂಪುಟ ವಿಸ್ತರಣೆ – ಮುನಿರತ್ನ, ಎಂಟಿಬಿ, ಶಂಕರ್ ಸೇರಿ 7 ಮಂದಿಗೆ ಸಚಿವ ಸ್ಥಾನ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೆಹಲಿ ಭೇಟಿ ಯಶಸ್ವಿಯಾಗಿದ್ದು, ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ದೂರವಾಣಿ ಕರೆ ಬಂದಿದೆ. ಜನವರಿ 13 ರಂದು ಮಧ್ಯಾಹ್ನ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರಕ್ಕೆ ಸಮಯ ನಿಗದಿಯಾಗಿದೆ.

ಶಾಸಕರಾದ ಮುನಿರತ್ನ, ಎಂಟಿಬಿ ನಾಗರಾಜ್, ಆರ್. ಶಂಕರ್ ಅವರಿಗೆ ಸಚಿವ ಸ್ಥಾನ ಗ್ಯಾರಂಟಿಯಾಗಿದೆ. ಇವರೊಂದಿಗೆ ಹಿರಿಯ ಶಾಸಕರಾದ ಉಮೇಶ್ ಕತ್ತಿ, ಮುರುಗೇಶ್ ನಿರಾಣಿ, ಸುನಿಲ್ ಕುಮಾರ್ ಮತ್ತು ತಿಪ್ಪಾರೆಡ್ಡಿ ಹಾಗೂ ಸಿ.ಪಿ. ಯೋಗೇಶ್ವರ್ ಸೇರಿದಂತೆ ಹಲವರು ಸಂಪುಟಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ. ಸಂಪುಟ ಪುನಾರಚನೆಯಾದಲ್ಲಿ ಹಲವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ಸಿಗಲಿದೆ. ಖಾತೆಗಳಲ್ಲಿಯೂ ಬದಲಾವಣೆಯಾಗಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...