alex Certify ರೈತರಿಗೆ ಖುಷಿ ಸುದ್ದಿ ನೀಡಿದ ಕೇಂದ್ರ: 6 ರಬಿ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಖುಷಿ ಸುದ್ದಿ ನೀಡಿದ ಕೇಂದ್ರ: 6 ರಬಿ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ

ಹೊಸ ಕೃಷಿ ಕಾನೂನಿನ ವಿರುದ್ಧ ರೈತರ ಹೋರಾಟ ತೀವ್ರವಾಗ್ತಿದ್ದು, ಇತ್ತ ಕೇಂದ್ರ ಸರ್ಕಾರ, ರೈತರ ಆದಾಯ ಹೆಚ್ಚಳಕ್ಕೆ ಮುಂದಾಗಿದೆ. ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಗೋಧಿ, ಬೇಳೆ, ಸಾಸಿವೆ ಸೇರಿದಂತೆ 6 ರಬಿ ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಲಾಗಿದೆ.

ಕ್ಯಾಬಿನೆಟ್ ಸಭೆಯಲ್ಲಿ, ಗೋಧಿ ಬೆಂಬಲ ಬೆಲೆಯನ್ನು ಪ್ರತಿ ಕ್ವಿಂಟಾಲ್‌ಗೆ 40 ರೂಪಾಯಿ ಹೆಚ್ಚಿಸಲಾಗಿದ್ದು, ಗೋಧಿ ಬೆಂಬಲ ಬೆಲೆ 2015 ರೂಪಾಯಿಯಾಗಿದೆ. ಕಡಲೆಯ ಬೆಂಬಲ ಬೆಲೆಯನ್ನು ಕ್ವಿಂಟಲ್ ಗೆ 130 ರೂಪಾಯಿ ಏರಿಕೆ ಮಾಡಲಾಗಿದ್ದು, ಕಡಲೆಗೆ 5,100 ರೂಪಾಯಿ ಬೆಂಬಲ ಬೆಲೆ ಸಿಗಲಿದೆ.

ಎಣ್ಣೆಬೀಜಗಳ ಬೆಂಬಲ ಬೆಲೆ ದೊಡ್ಡ ಮಟ್ಟದಲ್ಲಿ ಏರಿಕೆ ಕಂಡಿದೆ. ಸಾಸಿವೆ ದರ ಪ್ರತಿ ಕ್ವಿಂಟಾಲ್‌ಗೆ 400 ರೂಪಾಯಿ ಹೆಚ್ಚಿಸಲಾಗಿದ್ದು, ಬೆಂಬಲ ಬೆಲೆ ಕ್ವಿಂಟಲ್ ಗೆ 4,650 ರೂಪಾಯಿಯಾಗಿದೆ. ಅದೇ ಸಮಯದಲ್ಲಿ, ಬೇಳೆಗಳ ಬೆಲೆ ಕೂಡ ಪ್ರತಿ ಕ್ವಿಂಟಾಲ್‌ಗೆ 400 ರೂಪಾಯಿ ಹೆಚ್ಚಾಗಿದ್ದು, ಪ್ರತಿ ಕ್ವಿಂಟಲ್ ಗೆ ಬೆಂಬಲ ಬೆಲೆ 5100  ರೂಪಾಯಿಯಾಗಲಿದೆ. ಪ್ರತಿ ಕ್ವಿಂಟಾಲ್‌ ಬಾರ್ಲಿ ಬೆಂಬಲ ಬೆಲೆ 1635 ರೂಪಾಯಿಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...