alex Certify ಲೋಕಾಯುಕ್ತ ಬಲಪಡಿಸಲು, ಸಭಾಪತಿ ಚುನಾವಣೆ ಬಗ್ಗೆ ಸಂಪುಟ ಸಭೆ ನಿರ್ಧಾರ: ಉಮೇಶ್ ಕತ್ತಿಗೆ ಸಂತಾಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಕಾಯುಕ್ತ ಬಲಪಡಿಸಲು, ಸಭಾಪತಿ ಚುನಾವಣೆ ಬಗ್ಗೆ ಸಂಪುಟ ಸಭೆ ನಿರ್ಧಾರ: ಉಮೇಶ್ ಕತ್ತಿಗೆ ಸಂತಾಪ

ಬೆಂಗಳೂರು: ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿದೆ.

ಸಭೆಯ ಆರಂಭಕ್ಕೆ ಮೊದಲು ದಿ. ಉಮೇಶ್ ಕತ್ತಿ ಅವರಿಗೆ ಸಂತಾಪ ಸೂಚಿಸಲಾಗಿದೆ. ಮೌನಾಚರಣೆಯ ಮೂಲಕ ಸಂಪುಟ ಸಚಿವರು ಉಮೇಶ್ ಕತ್ತಿಯವರಿಗೆ ಸಂತಾಪ ಸೂಚಿಸಿದ್ದಾರೆ.

ವಿಧಾನ ಪರಿಷತ್ ಸಭಾಪತಿ, ಉಪಸಭಾಪತಿ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮುಂದಿನ ಬುಧವಾರದೊಳಗೆ ಚುನಾವಣೆ ನಡೆಸುವ ಸಾಧ್ಯತೆ ಇದೆ. ವಿಧಾನ ಪರಿಷತ್ ಸಭಾಪತಿ ಮತ್ತು ಉಪ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದು, ರಾಜ್ಯಪಾಲರಿಗೆ ನಾಳೆ ಸರ್ಕಾರದಿಂದ ಪತ್ರ ರವಾನಿಸಲಾಗುವುದು. ಲೋಕಾಯುಕ್ತ ಬಲಪಡಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...