alex Certify ಸಂಪುಟಕ್ಕೆ ಮೇಜರ್ ಸರ್ಜರಿ: 10 ಸಚಿವರಿಗೆ ಕೊಕ್, ಹೊಸಬರಿಗೆ ಆದ್ಯತೆ; ನಿಗಮ –ಮಂಡಳಿಗೂ ನೇಮಕಾತಿ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಪುಟಕ್ಕೆ ಮೇಜರ್ ಸರ್ಜರಿ: 10 ಸಚಿವರಿಗೆ ಕೊಕ್, ಹೊಸಬರಿಗೆ ಆದ್ಯತೆ; ನಿಗಮ –ಮಂಡಳಿಗೂ ನೇಮಕಾತಿ ಸಾಧ್ಯತೆ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಬಂದು ಹೋದ ನಂತರ ಸಂಪುಟ ಸರ್ಜರಿಗೆ ಪ್ರಕ್ರಿಯೆ ಆರಂಭವಾಗಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ವಾರದಲ್ಲಿ ಸಚಿವಾಕಾಂಕ್ಷಿಗಳ ಪಟ್ಟಿಯೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ತೆರಳಲಿದ್ದಾರೆ. 10 ಸಚಿವರನ್ನು ಸಂಪುಟದಿಂದ ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲಾಗುತ್ತದೆ. ಕ್ರಿಯಾಶೀಲವಾಗಿರುವ ಹೊಸ ಮುಖಗಳಿಗೆ ಆದ್ಯತೆ ನೀಡಲಾಗುವುದು. ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಸಚಿವ ಸ್ಥಾನ ಸಿಗದ ಜಿಲ್ಲೆಗಳಿಗೆ ಆದ್ಯತೆ ನೀಡಲಾಗುತ್ತದೆ. ಎಲ್ಲಾ ವರ್ಗದವರಿಗೂ ಸಂಪುಟದಲ್ಲಿ ಸ್ಥಾನ ಸಿಗುವಂತೆ ನೋಡಿಕೊಳ್ಳಲಾಗುವುದು.

ಅಲ್ಲದೇ, ಸಂಪುಟ ಪುನಾರಚನೆ ಜೊತೆಗೆ ನಿಗಮ-ಮಂಡಳಿಗಳ ನೇಮಕಾತಿಗೂ ಚಾಲನೆ ನೀಡಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...