alex Certify ಸಂಪುಟ ರಚನೆ, ಖಾತೆ ಹಂಚಿಕೆ ಬೆನ್ನಲ್ಲೇ ಭುಗಿಲೆದ್ದ ಅಸಮಾಧಾನ: ಕುತೂಹಲ ಮೂಡಿಸಿದ ರಹಸ್ಯ ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಪುಟ ರಚನೆ, ಖಾತೆ ಹಂಚಿಕೆ ಬೆನ್ನಲ್ಲೇ ಭುಗಿಲೆದ್ದ ಅಸಮಾಧಾನ: ಕುತೂಹಲ ಮೂಡಿಸಿದ ರಹಸ್ಯ ಸಭೆ

ಬೆಂಗಳೂರು: ಸಂಪುಟ ರಚನೆ, ಖಾತೆ ಹಂಚಿಕೆ ಬೆನ್ನಲ್ಲೇ ಅಸಮಾಧಾನ ಸ್ಪೋಟಗೊಂಡಿದ್ದು, ನಾಳೆ ಅಥವಾ ನಾಡಿದ್ದು ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಸಭೆ ನಡೆಸಲಾಗುವುದು ಎನ್ನಲಾಗಿದೆ.

ಅಸಮಾಧಾನಿತ ಶಾಸಕರನ್ನು ಬಾಲಚಂದ್ರ ಜಾರಕಿಹೊಳಿ ಒಟ್ಟುಗೂಡಿಸುತ್ತಿದ್ದಾರೆ. ಮಹೇಶ್ ಕುಮಟಳ್ಳಿ, ಶ್ರೀಮಂತ ಪಾಟೀಲ್, ಶಂಕರ್ ಜೊತೆಗೆ ಚರ್ಚೆ ನಡೆಸಿದ್ದಾರೆ. ಸರ್ಕಾರ ರಚನೆಗೆ ಕಾರಣವಾದವರಿಗೆ ಮಂತ್ರಿ ಸ್ಥಾನ ಕೊಡಿ ಎಂದು ಶಾಸಕರು ಬೆಂಗಳೂರಿನಲ್ಲಿ ನಡೆಸಲಿರುವ ಸಭೆ ಭಾರೀ ಕುತೂಹಲ ಮೂಡಿಸಿದೆ.

ಸಂಪುಟ ರಚನೆ ಮತ್ತು ಖಾತೆ ಹಂಚಿಕೆ ನಂತರ ಅಸಮಾಧಾನ ಸ್ಪೋಟಗೊಂಡಿದ್ದು, ಸಚಿವ ಆನಂದ್ ಸಿಂಗ್ ಖಾತೆ ಬಗ್ಗೆ ಅಸಮಾಧಾನಗೊಂಡು ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾಗಿದ್ದಾರೆ.

ಇನ್ನು ಸಚಿವ ಸ್ಥಾನ ವಂಚಿತ ಹಲವು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದು, ಬೆಂಗಳೂರಿನಲ್ಲಿ ನಾಳೆ ಅಥವಾ ನಾಡಿದ್ದು ಶಾಸಕರ ಸಭೆ ನಡೆಸಿ ಮುಂದಿನ ನಡೆ ಬಗ್ಗೆ ತೀರ್ಮಾನಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...