alex Certify BIG NEWS: ರಾಜ್ಯ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ? ಕುತೂಹಲ ಮೂಡಿಸಿದ ಸಿಎಂ-ಡಿಸಿಎಂ ದೆಹಲಿ ಪ್ರವಾಸ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ? ಕುತೂಹಲ ಮೂಡಿಸಿದ ಸಿಎಂ-ಡಿಸಿಎಂ ದೆಹಲಿ ಪ್ರವಾಸ

ಬೆಂಗಳೂರು: ರಾಜ್ಯ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ನಡೆಯಲಿದೆಯೇ? ಹೀಗೊಂದು ಚರ್ಚೆಯನ್ನು ಹುಟ್ಟುಹಾಕಿದೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ದೆಹಲಿ ಪ್ರವಾಸ.

ಲೋಕಸಭಾ ಚುನಾವಣಾ ಫಲಿತಾಂಶ, ಹಗರಣಗಳ ಆರೋಪದ ಬಳಿಕ ಇದೀಗ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ಆಗುವ ಸಾಧ್ಯತೆ ಇದ್ದು, ಕೆಲ ಸಚಿವರ ಬದಲಾವಣೆಯಾಗಲಿದೆ ಎಂದು ಹೇಳಲಾಗುತ್ತಿದೆ.

ನಾಳೆ ದೆಹಲಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹೈಕಮಾಂಡ್ ಜೊತೆ ಈ ನಿಟ್ಟಿನಲ್ಲಿಯೂ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಕೆಲ ಸಚಿವರ ಖಾತೆಗಳನ್ನು ಅದಲು ಬದಲು ಮಾಡುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ.

ವಾಲ್ಮೀಕಿ ನಿಗಮದ ಹಗರಣದ ಬಳಿಕ ನಾಗೇಂದ್ರ ಅವರಿಂದ ತೆರವಾದ ಸಚಿವ ಸ್ಥಾನಕ್ಕೆ ನೂತನ ಸಚಿವರ ನೇಮಕ ಸೇರಿದಂತೆ ಇನ್ನು ಕೆಲ ಸಚಿವರ ಖಾತೆ ಬದಲಾವಣೆ ನಿಟ್ಟಿನಲ್ಲಿ ಸಮಾಲೋಚನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿಎಂ ಹಾಗೂ ಡಿಸಿಎಂ ಅವರ ದೆಹಲಿ ಪ್ರವಾಸ ಸಾಕಷ್ಟು ಕುತೂಹಲ ಮೂಡಿಸಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...