alex Certify BIG NEWS: ಹೊಸ ಪಕ್ಷ ಸ್ಥಾಪನೆಗೆ ಮುಂದಾದ ಕ್ಯಾಪ್ಟನ್​ ಅಮರೀಂದರ್​ ಸಿಂಗ್..​​..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೊಸ ಪಕ್ಷ ಸ್ಥಾಪನೆಗೆ ಮುಂದಾದ ಕ್ಯಾಪ್ಟನ್​ ಅಮರೀಂದರ್​ ಸಿಂಗ್..​​..!

ಪಂಜಾಬ್​ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್​ ಅಮರೀಂದರ್​ ಸಿಂಗ್​ ಈಗಾಗಲೇ ತಾವು ಬಿಜೆಪಿ ಸೇರ್ಪಡೆಯಾಗುವುದಿಲ್ಲ ಎಂಬ ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ. ಅಮರೀಂದರ್​​ ‘ಪಂಜಾಬ್​ ವಿಕಾಸ್​ ಪಾರ್ಟಿ’ ಎಂಬ ಹೊಸ ಪಕ್ಷವನ್ನು ಸ್ಥಾಪನೆ ಮಾಡಲಿದ್ದಾರೆ ಎನ್ನಲಾಗಿದೆ. ಕೆಲವೇ ದಿನಗಳಲ್ಲಿ ಆಪ್ತರೊಂದಿಗೆ ಈ ಸಂಬಂಧ ಸಭೆ ನಡೆಸಲಿರುವ ಅಮರೀಂದರ್​ ಸಿಂಗ್​ ಪಕ್ಷ ಸ್ಥಾಪನೆ ಬಗ್ಗೆ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಕ್ಯಾಪ್ಟನ್​ ಅಮರೀಂದರ್​ ತಮ್ಮ ಸ್ವಂತ ಪಕ್ಷ ಸ್ಥಾಪನೆ ಘೋಷಣೆ ಮಾಡುವ ಮುನ್ನ ಪಂಜಾಬ್​ನ ರೈತ ನಾಯಕರನ್ನು ಹಾಗೂ ನವಜೋತ್​ ಸಿಂಗ್​ ಸಿಧು ವಿರೋಧಿ ಬಣದವರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಅಲ್ಲದೆ ಅಮರೀಂದರ್​ ಸಿಂಗ್​​ ಪಂಜಾಬ್​​ನ ಮುಂಬರುವ ವಿಧಾನಸಭಾ ಚುನಾವಣೆ ಅಂಗವಾಗಿ ಸಣ್ಣ ಪಕ್ಷಗಳ ಜೊತೆ ಸಂಪರ್ಕದಲ್ಲೂ ಇದ್ದಾರೆ ಎಂದು ಮೂಲಗಳು ತಿಳಿಸಿವೆ.

ಕ್ಯಾಪ್ಟನ್​ ಅಮರೀಂದರ್​ ಸಿಂಗ್​ ಕೆಲ ದಿನಗಳ ಹಿಂದಷ್ಟೇ ದೆಹಲಿಯಲ್ಲಿ ಕೇಂದ್ರ ಗೃಹ ಮಂತ್ರಿ ಅಮಿತ್​ ಶಾ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್​ ದೋವಲ್​ರನ್ನು ಭೇಟಿಯಾಗಿದ್ದರು. ಅಮರೀಂದರ್ ತಮ್ಮನ್ನು ಪಕ್ಷದಲ್ಲಿ ಗೌರವಿಸಿದ ಕಾರಣ ಕಾಂಗ್ರೆಸ್​ ತ್ಯಜಿಸುತ್ತಿರೋದಾಗಿ ಹೇಳಿದ್ದರು. ಇದಾದ ಬಳಿಕ ರಾಜಕೀಯ ಜೀವನದಲ್ಲಿ ಅಮರೀಂದರ್​ ಮುಂದೆ ಯಾವ ಹೆಜ್ಜೆ ಇಡುತ್ತಾರೆ ಎಂಬ ಅನುಮಾನ ಮೂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...