alex Certify ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಕಾರ್, ಇಬ್ಬರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಕಾರ್, ಇಬ್ಬರ ಸಾವು

ಮೈಸೂರು: ಕಬಿನಿ ಬಲದಂಡೆ ನಾಲೆಗೆ ಕಾರ್ ಬಿದ್ದು ಇಬ್ಬರು ವಕೀಲರು ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆ ಸರಗೂರು ತಾಲೂಕಿನ ಸಾಗರೆ ಗ್ರಾಮದ ಬಳಿ ಘಟನೆ ನಡೆದಿದೆ.

ಹುಣಸೂರಿನ ವಕೀಲರಾದ ಶಂಕರ್ ಮತ್ತು ದಿನೇಶ್ ಮೃತಪಟ್ಟವರು ಎಂದು ಹೇಳಲಾಗಿದೆ. ಚಿಕ್ಕದೇವಮ್ಮ ದೇವಸ್ಥಾನದ ಬೆಟ್ಟದಿಂದ ಕಬಿನಿ ಡ್ಯಾಮ್ ಗೆ ಪ್ರಯಾಣ ಬೆಳೆಸುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿದ ಕಾರ್ ಕಬಿನಿ ಬಲದಂಡೆ ನಾಲೆಗೆ ಉರುಳಿ ಬಿದ್ದಿದೆ. ವಕೀಲ ಅಶೋಕ್ ಈಜಿ ದಡ ಸೇರಿ ಜೀವ ಉಳಿಸಿಕೊಂಡಿದ್ದಾರೆ. ಸ್ಥಳೀಯರ ನೆರವಿನಿಂದ ಕಾರ್ ಮತ್ತು ಮೃತದೇಹಗಳನ್ನು ಪೋಲೀಸರು ಮೇಲೆತ್ತಿದ್ದಾರೆ. ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...