alex Certify BIG NEWS: ಡಿಸಿಪಿ ಕಾಲಿನ ಮೇಲೆ ಹರಿದ ರೈತ ಮುಖಂಡನ ಕಾರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿಸಿಪಿ ಕಾಲಿನ ಮೇಲೆ ಹರಿದ ರೈತ ಮುಖಂಡನ ಕಾರು

ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದ್ದು, ಈ ವೇಳೆ ಅವಘಡವೊಂದು ಸಂಭವಿಸಿದೆ.

ರಾಜಧಾನಿ ಬೆಂಗಳೂರಿನಲ್ಲಿ ರೈತರ ಪ್ರತಿಭಟನೆ ಭುಗಿಲೆದ್ದಿದ್ದು, ಈ ನಡುವೆ ಗೊರಗುಂಟೆ ಪಾಳ್ಯದ ಜಂಕ್ಷನ್ ಬಳಿ ಪ್ರತಿಭಟನೆ ವೇಳೆ ಅಪಘಾತ ಸಂಭವಿಸಿದೆ. ರೈತ ಮುಖಂಡರೊಬ್ಬರ ಕಾರು ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ಅವರ ಕಾಲಿನ ಮೇಲೆ ಹರಿದಿದೆ. ಕೂದಲೆಳೆ ಅಂತರದಲ್ಲಿ ಡಿಸಿಪಿ ಧರ್ಮೇಂದ್ರ ಕುಮಾರ್ ಪಾರಾಗಿದ್ದಾರೆ.

ಭರ್ಜರಿ ಖುಷಿ ಸುದ್ದಿ: RTO ದಲ್ಲಿ ಮಾತ್ರವಲ್ಲ ಇಲ್ಲೂ ಸಿಗಲಿದೆ ಚಾಲನಾ ಪರವಾನಗಿ

ಗೊರಗುಂಟೆ ಪಾಳ್ಯ ಜಂಕ್ಷನ್ ಬಳಿ ರೈತರು ಬೆಳಿಗ್ಗೆಯಿಂದ ಪ್ರತಿಭಟನೆ ನಡೆಸುತ್ತಿದ್ದು, ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಭದ್ರತೆಗೆ ನಿಯೋಜನೆಗೊಡಿದ್ದ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಲು ಮುಂದಾಗಿದ್ದಾರೆ. ಈ ವೇಳೆ ರೈತ ಮುಖಂಡರೊಬ್ಬರ ಕಾರು ಡಿಸಿಪಿ ಪಾದದ ಮೇಲೆ ಚಲಿಸಿದೆ. ಘಟನೆಗೆ ಸಂಬಂಧಿಸಿದಂತೆ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...