alex Certify ರಾಜ್ಯದಲ್ಲಿಂದು 8370 ಸಕ್ರಿಯ ಪ್ರಕರಣ, 239 ಜನರಿಗೆ ಸೋಂಕು; ಬಹುತೇಕ ಜಿಲ್ಲೆಗಳಲ್ಲಿ ಶೂನ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು 8370 ಸಕ್ರಿಯ ಪ್ರಕರಣ, 239 ಜನರಿಗೆ ಸೋಂಕು; ಬಹುತೇಕ ಜಿಲ್ಲೆಗಳಲ್ಲಿ ಶೂನ್ಯ

ಬೆಂಗಳೂರು: ರಾಜ್ಯದಲ್ಲಿ ಇಂದು 239 ಜನರಿಗೆ ಸೋಂಕು ತಗುಲಿದೆ, 376 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 5 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 29,88,760 ಕ್ಕೆ ಏರಿಕೆಯಾಗಿದೆ. ಇದುವರೆಗೆ 29,42,272 ಜನ ಗುಣಮುಖರಾಗಿದ್ದು, 38,089 ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 8370 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 0.39 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 139 ಜನರಿಗೆ ಸೋಂಕು ತಗುಲಿದ್ದು, ಮೂವರು ಮೃತಪಟ್ಟಿದ್ದಾರೆ.

190 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 6,424 ಸಕ್ರಿಯ ಪ್ರಕರಣಗಳು ಇವೆ.

ಜಿಲ್ಲಾವಾರು ಮಾಹಿತಿ:

ಬಾಗಲಕೋಟೆ 0, ಬಳ್ಳಾರಿ 0, ಬೆಂಗಳೂರು ಗ್ರಾಮಾಂತರ 1, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 0, ಚಿತ್ರದುರ್ಗ 0, ದಾವಣಗೆರೆ 0, ಗದಗ 0, ಹಾವೇರಿ 0, ಕಲಬುರ್ಗಿ 1, ಕೋಲಾರ 0, ಕೊಪ್ಪಳ 0, ರಾಯಚೂರು 0, ರಾಮನಗರ 0, ಶಿವಮೊಗ್ಗ 1, ವಿಜಯಪುರ 0, ಯಾದಗಿರಿ 0, ಬೆಂಗಳೂರು ನಗರ 139, ದಕ್ಷಿಣಕನ್ನಡ 18, ಮೈಸೂರು 31 ಹೊಸ ಪ್ರಕರಣ ವರದಿಯಾಗಿವೆ.

ಮೃತಪಟ್ಟವರ ಸಂಖ್ಯೆ:

ಬೆಂಗಳೂರು ನಗರ 3, ತುಮಕೂರು 1, ಉತ್ತರಕನ್ನಡ 1 ಸೇರಿ ರಾಜ್ಯದಲ್ಲಿಂದು 5 ಜನ ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...