alex Certify ದತ್ತಮಾಲಾಧಾರಿಗಳ ಮೇಲೆ ಅನ್ಯಕೋಮಿನವರಿಂದ ಹಲ್ಲೆ ಪ್ರಕರಣ : ನಾಲ್ವರ ವಿರುದ್ಧ ‘FIR’ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದತ್ತಮಾಲಾಧಾರಿಗಳ ಮೇಲೆ ಅನ್ಯಕೋಮಿನವರಿಂದ ಹಲ್ಲೆ ಪ್ರಕರಣ : ನಾಲ್ವರ ವಿರುದ್ಧ ‘FIR’ ದಾಖಲು

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ದತ್ತಮಾಲಾಧಾರಿಗಳ ಮೇಲೆ ಅನ್ಯಕೋಮಿನವರಿಂದ ಹಲ್ಲೆ ಪ್ರಕರಣ ಸಂಬಂಧ ನಾಲ್ವರ ವಿರುದ್ಧ FIR ದಾಖಲಾಗಿದೆ.

ಚಿಕ್ಕಮಗಳೂರು ತಾಲೂಕಿನ ಹಾಂದಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದತ್ತಜಯಂತಿ ಹಿನ್ನೆಲೆ ಗ್ರಾಮದಲ್ಲಿ ದತ್ತ ಮಾಲಾಧಾರಿಗಳು ಧ್ವಜ ಕಟ್ಟುತ್ತಿದ್ದಾಗ ಅನ್ಯ ಕೋಮಿನ ಯುವಕರು ಬಂದು ಅಡ್ಡಿ ಪಡಿಸಿ ಗಲಾಟೆ ನಡೆಸಿದ್ದರು.ಮಸೀದಿ ಬಳಿ ಕೇಸರಿ ಧ್ವಜ ಕಟ್ಟದಂತೆ ಅನ್ಯಕೋಮಿನ ಯುವಕರು ಅಡ್ಡಿ ಪಡಿಸಿ  ಹಲ್ಲೆ ನಡೆಸಿದ್ದಾರೆ ಎಂದು  ಆರೋಪಿಸಲಾಗಿತ್ತು.

ಇದೀಗ ಹಾಂದಿ ಗ್ರಾಮದ ಸಬ್ಬರ್ ಅಹಮದ್, ಶಾಹಿದ್, ಜೀಶಾನ್, ಇಂದ್ರೀಸ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.ಚಿಕ್ಕಮಗಳೂರಿನ ಹಾಂದಿಯಲ್ಲಿ ಮಸೀದಿ ಬಳಿ ಕೇಸರಿ ಧ್ವಜ ಕಟ್ಟುವ ವಿಚಾರಕ್ಕೆ ಎರಡು ಕೋಮಿನ ನಡುವೆ ಗಲಾಟೆ ನಡೆದಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...