alex Certify ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದ ಕಾವೇರಿ ನಿರ್ವಹಣಾ ಪ್ರಾಧಿಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದ ಕಾವೇರಿ ನಿರ್ವಹಣಾ ಪ್ರಾಧಿಕಾರ

ಕರ್ನಾಟಕದ ಕೆಆರ್​ಎಸ್​ ಜಲಾಶಯದಿಂದ ತಮಿಳುನಾಡಿಗೆ ಆರರಿಂದ ಏಳು ಟಿಎಂಸಿ ನೀರು ಹರಿಸುವಂತೆ ಕಾವೇರಿ ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಎಸ್​.ಕೆ. ಹಲ್ದರ್​ ಸೂಚನೆ ನೀಡಿದ್ದಾರೆ. ದೆಹಲಿಯಲ್ಲಿ ಇಂದು ನಡೆದ 13ನೇ ಪ್ರಾಧಿಕಾರದ ಸಭೆಯಲ್ಲಿ ಹಲ್ದರ್​ ಈ ಸೂಚನೆ ನೀಡಿದ್ದಾರೆ.

ಸುಪ್ರೀಂ ಕೋರ್ಟ್​ ಆದೇಶದಂತೆ ಆಗಸ್ಟ್​ ತಿಂಗಳ ಅಂತ್ಯದೊಳಗಾಗಿ 86 ಟಿಎಂಸಿ ನೀರು ಬಿಡುಗಡೆ ಮಾಡಬೇಕಿತ್ತು. ಆದರೆ ಹವಾಮಾನ ಇಲಾಖೆ ನೀಡಿರುವ ವರದಿ ಆಧರಿಸಿ ಕೆಆರ್​ಎಸ್​ ಜಲಾಶಯದ ಭಾಗದಲ್ಲಿರುವ ಪ್ರಸ್ತುತ ಪರಿಸ್ಥಿತಿಯನ್ನು ವಿವರಿಸಿದ ಕರ್ನಾಟಕದ ಅಧಿಕಾರಿಗಳು ನೀರು ಬಿಡುಗಡೆ ಪ್ರಮಾಣದಲ್ಲಿ ವಿನಾಯ್ತಿ ಕೇಳಿದ್ದಾರೆ.

ಕಾವೇರಿ ತೀರದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಹೀಗಾಗಿ ಕೆಆರ್​ಎಸ್​ ಜಲಾಶಯ ಕೂಡ ತುಂಬಿಲ್ಲ. ಈ ಬಾರಿ ಮಳೆಯಲ್ಲಿ 25 ಪ್ರತಿಶತ ಕೊರತೆ ಕಂಡುಬಂದಿದೆ. ಹೀಗಾಗಿ ಜೂನ್​ ಹಾಗೂ ಜುಲೈ ತಿಂಗಳ ಪಾಲಿನ ನೀರನ್ನು ಸದ್ಯಕ್ಕೆ ಬಿಡುಗಡೆ ಮಾಡುವುದು ಸಾಧ್ಯವಿಲ್ಲ ಎಂದು ಕರ್ನಾಟಕದ ಅಧಿಕಾರಿಗಳು ಸಭೆಯಲ್ಲಿ ವಿವರಿಸಿದ್ದಾರೆ.

ಕರ್ನಾಟಕವು ಆಗಸ್ಟ್​ ಅಂತ್ಯದ ವೇಳೆಗೆ ತಮಿಳುನಾಡಿಗೆ 86 ಟಿಎಂಸಿ ನೀರು ಬಿಡುಗಡೆ ಮಾಡಬೇಕಿತ್ತು. ಆದರೆ ಕರ್ನಾಟಕವು 57 ಟಿಎಂಸಿ ನೀರು ಬಿಡುಗಡೆ ಮಾಡಿರೋದಾಗಿ ಹೇಳಿದೆ. ಸೆಪ್ಟೆಂಬರ್​ ತಿಂಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ಹೀಗಾಗಿ ಸೆಪ್ಟೆಂಬರ್​ ತಿಂಗಳಲ್ಲಿ ನೀರನ್ನು ಬಿಡುವಂತೆ ಸೂಚನೆ ನೀಡಿದ್ದೇನೆ. ಉತ್ತಮ ಮಳೆಯಾಗುತ್ತಿದ್ದಂತೆ ಬಾಕಿ ನೀರನ್ನು ಬಿಡುವಂತೆ ಹಲ್ದಾರ್​ ಸಭೆಯಲ್ಲಿ ಸೂಚನೆ ನೀಡಿರೋದಾಗಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...